ನಾಡಿಗ್ ಸಾಹಿತ್ಯ ಪ್ರತಿಷ್ಠಾನದ ವಾರ್ಷಿಕ ಪ್ರಶಸ್ತಿ ಪ್ರಕಟ…

ತುಮಕೂರಿನ ನಾಡಿಗ್ ಸಾಹಿತ್ಯ ಪ್ರತಿಷ್ಠಾನ ಕೊಡುವ ಐದನೇ ವರ್ಷದ ೨೦೨೨ನೇ ಸಾಲಿನ ರಾಜ್ಯಮಟ್ಟದ ದಿ. ಡಾ.ನಾಡಿಗ್ ಕೃಷ್ಣಮೂರ್ತಿ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ರಾಜ್ಯಮಟ್ಟದ ವಿದ್ಯಾವಾಚಸ್ಪತಿ ಡಾ. ಕವಿತಾಕೃಷ್ಣ ಸಾಹಿತ್ಯ ಪ್ರಶಸ್ತಿ ಪ್ರಕಟವಾಗಿದೆ.

೨೦೨೨ನೇ ಸಾಲಿನ ದಿ. ಡಾ.ನಾಡಿಗ್ ಕೃಷ್ಣಮೂರ್ತಿ ಪತ್ರಿಕೋದ್ಯಮ ಪ್ರಶಸ್ತಿಗೆ ಇಬ್ಬರು ಆಯ್ಕೆಯಾಗಿದ್ದು, ೪೭ ವರ್ಷಗಳಿಂದ ತುಮಕೂರಿನಲ್ಲಿ “ಅಮರ ಸಂದೇಶ” ಎಂಬ ದಿನ ಪತ್ರಿಕೆಯನ್ನು ನಡೆಸುತ್ತಿರುವ ಪತ್ರಿಕೆಯ ಸಂಪಾದಕರಾದ ಹಾಗೂ ಕನ್ನಡದ ಹೋರಾಟಗಾರ ತುಮಕೂರಿನ ತೊಗ ಅಡವಿಶಪ್ಪ ಹಾಗೂ ಕಳೆದ ಹತ್ತು ವರ್ಷಗಳಿಂದ “ಅಮರ ಬಾಪು ಚಿಂತನ” ಪತ್ರಿಕೆಯನ್ನು ನಡೆಸುತ್ತಿರುವ ಹಿರಿಯ ಗಾಂಧಿವಾದಿ ಹಾಗೂ ಪತ್ರಿಕೆಯ ಸಂಪಾದಕರಾದ ಶ್ರೀ ಜೀರಿಗೆ ಲೋಕೇಶ್ ಆಯ್ಕೆಯಾಗಿದ್ದಾರೆ.

೨೦೨೨ನೇ ಸಾಲಿನ ಡಾ. ಕವಿತಾಕೃಷ್ಣ ಸಾಹಿತ್ಯ ಪ್ರಶಸ್ತಿಗೆಗೂ ಸಹ ಇಬ್ಬರನ್ನು ಆಯ್ಕೆಮಾಡಲಾಗಿದ್ದು, “ಮಾತಾಪಿತೃಗಳ ಕೊಡುಗೆ” ಕೃತಿಕಾರರಾದ ಬೆಂಗಳೂರಿನ ಶ್ರೀ ಪ್ರಮೋದ್ ಕುಲಕರ್ಣಿ ಹಾಗೂ “ಮುದ್ದಿನ ಅಪ್ಪ ಬಸವಣ್ಯಪ್ಪ” ಕೃತಿಯ ಲೇಖಕರಾದ ತುಮಕೂರಿನ ಡಾ. ಭರತ್ ರಾಜ್ ರವರನ್ನು ತೀರ್ಪುಗಾರರು ಆಯ್ಕೆಮಾಡಿದ್ದಾರೆ.

ಜೂನ್ ತಿಂಗಳಿನಲ್ಲಿ ತುಮಕೂರಿನಲ್ಲಿ ಪುಸ್ತಕ ಬಿಡುಗಡೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ.

‍ಲೇಖಕರು avadhi

May 12, 2023

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: