-ಹರೀಶ್ ಕೇರ

ಮಹಾಭಾರತದ ಹರಿಕತೆ ನಡೆದಿರುವಾಗ
ದಾಸರು ನಾಲಗೆ ತಪ್ಪಿ
ನಾಗರಿಕತೆ ಎಂದರೆ ಹಿಂಸೆಯ ಕತೆ
ಎಂದುಬಿಟ್ಟರು
ದಾಸರು ನಾಲಗೆ ತಪ್ಪಿ
ನಾಗರಿಕತೆ ಎಂದರೆ ಹಿಂಸೆಯ ಕತೆ
ಎಂದುಬಿಟ್ಟರು
ಆಮೇಲೆ ಚಡಪಡಿಸಿದರು
ತಮ್ಮ ಮಾತನ್ನು ಅಲ್ಲೇ ಬಿಡುವುದೋ
ವ್ಯಾಖ್ಯಾನಿಸುವುದೋ ಅರಿಯದ ಸಂದಿಗ್ದದಲ್ಲಿ
ಮುಂದೆ ಕುಳಿತ ಮಂದಿಯ ಮುಖ ನೋಡಿದರು
ಉದ್ದ ಅಡ್ಡ ನಾಮಗಳು ಮುದ್ರೆಗಳು
ಮುಗಿದ ಕೈಗಳು ಬೋಳಿಸಿದ ತಲೆಗಳು
ಬಿಟ್ಟ ಮೈ ಹೊದ್ದ ಶಲ್ಯ ಇಣುಕುವ ಜನಿವಾರ
ಬೊಜ್ಜು ಮೈ ಹುಳಿ ತೇಗು
ತರಹೇವಾರಿ ಶಿಖೆಗಳು
ಕಾಸಿನಗಲದ ಕುಂಕುಮ ತಲೆಗೆ ಸೆರಗು
ಮುತ್ತೈದೆಯರ ಸಕಲ ಭೂಷಿತಗಳು
ಮಾತುಗಳು ಗಂಟಲಲ್ಲೇ ಉಳಿದವು
ಕುರುಕ್ಷೇತ್ರದ ನೆತ್ತರ ನದಿ ಹಾಗೇ ಮುಂದುವರಿಯಿತು
ಬಾಯಿ ಬಿಡುವ ಭೂಮಿ ಎದೆ ಸೀಳಿದ ಗದೆ
ನೀರ ತಡಿಯಲ್ಲಿ ಅನಾಥ ಹೆಣ ಕತ್ತಲಲ್ಲಿ ಕುಣಿವ ಕತ್ತಿ
ಧರ್ಮದ ವಿಜಯಕ್ಕೆ ನಾರಿಯರ ಆರ್ತನಾದದ ಬೆಂಬಲ
ಭಗ್ನ ಬ್ರಹ್ಮಾಸ್ತ್ರಕ್ಕೆ ಅರ್ಧ ಭ್ರೂಣ
ಇತ್ತೀಚೆಗೆ ದಾಸರು
ವಿಪರೀತ ತಡವರಿಸುತ್ತಾರೆ
ಅನ್ನುತ್ತಾರೆ ಎಲ್ಲರೂ





0 Comments