‘ನಿನ್ನ ದಾಖಲೆ ಯಾವಾಗ ನೀಡುತ್ತಿ?’ ಕೃತಿ ಹೊರಬಂತು

‘ನಿನ್ನ ದಾಖಲೆ ಯಾವಾಗ ನೀಡುತ್ತಿ?’ – ಇದೀಗ ಪ್ರಕಟವಾಗಿದೆ

ಈ ಕವನ ಸಂಕಲನದಲ್ಲಿ ನನ್ನದೊಂದು ಕವನ ಇದೆ. ಸ್ನೇಹಿತರ ಹಲವು‌ ಕವನಗಳಿವೆ.

ಎನ್.ಆರ್.ಸಿ ಗೆ ಕಲಾ ಪ್ರತಿರೋಧದ ಕವಿತೆಗಳ, ಪೋಸ್ಟರುಗಳ, ಕಲಾಕೃತಿಗಳ ದಿಢೀರ್ ಸಂಕಲನ

ಕೊಪ್ಪಳದ ಕವಿ ಹಾಗೂ ಪತ್ರಕರ್ತ ಸಿರಾಜ್ ಬಿಸರಳ್ಳಿಯವರು ಇತ್ತೀಚೆಗೆ ನಡೆದ ಆನೆಗೊಂದಿ ಉತ್ಸವದಲ್ಲಿ ತಾವು ರಚಿಸಿದ್ದ ‘ನಿನ್ನ ದಾಖಲೆ ಯಾವಾಗ ನೀಡುತ್ತಿ?’ ಎಂ¨ ಕವಿತೆಯೊಂದನ್ನು ಓದಿದರು. ಪ್ರಭುತ್ವದ ಭಕ್ತರು ನೀಡಿದ ದೂರಿನ ಮೇರೆಗೆ ಪೊಲೀಸರು ಕವಿಯ ಮೇಲೆ FIR ಹಾಕಿದ್ದಾರೆ. ಒಂದು ಕವಿತೆಯ ಮೇಲೆ FIR ದಾಖಲಿಸಿದ್ದನ್ನು ಪ್ರತಿಭಟಿಸಿ, ಎನ್.ಆರ್.ಸಿ ಯನ್ನು ಪ್ರಶ್ನಿಸುವ, ಪ್ರಭುತ್ವಕ್ಕೆ ಸೆಡ್ಡು ಹೊಡೆಯುವ ಸಾಲು ಸಾಲು ಕವಿತೆಗಳು ಬಂದಿವೆ.

ಈಗಾಗಲೇ ಎನ್.ಆರ್.ಸಿ-ಪ್ರತಿರೋಧದ ಸಭೆ, ರ್ಯಾಲಿ, ಮೆರವಣಿಗೆಗಳಲ್ಲಿ ಕವಿತೆ ವಾಚನ ಸಾಮಾನ್ಯವಾಗಿತ್ತು. ಅತ್ಯಂತ ಸೃಜನಶೀಲ ಪೋಸ್ಟರುಗಳು, ಬ್ಯಾನರುಗಳು, ಕಲಾಕೃತಿಗಳು ದೇಶದಾದ್ಯಂತ ಪ್ರತಿರೋಧದ ಭಾಗವಾಗಿ ಬಂದಿವೆ. ಒಟ್ಟಾರೆಯಾಗಿ ಇದನ್ನು ‘ಎನ್.ಆರ್.ಸಿ ವಿರುದ್ಧü ಕಲಾ ಪ್ರತಿರೋಧ’ ಎಂದು ಕರೆಯಬಹುದಾದಷ್ಟು ನಿಚ್ಚಳವಾದ ಟ್ರೆಂಡ್ ಆಗಿದೆ. ‘ನಿನ್ನ ದಾಖಲೆ ಯಾವಾಗ ನೀಡುತ್ತಿ?’ ಇಂತಹ ಕಲಾ ಪ್ರತಿರೋಧದ ಕವಿತೆಗಳ, ಪೋಸ್ಟರುಗಳ, ಕಲಾಕೃತಿಗಳ ದಿಢೀರ್ ಸಂಕಲನ.

-ಯಮುನಾ ಗಾಂವ್ಕರ್ 

‍ಲೇಖಕರು avadhi

February 6, 2020

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: