ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

'ನುಡಿಸಿರಿ' ಅಧ್ಯಕ್ಷರಾಗಿ ವೈದೇಹಿ


ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವರ್ಷಂಪ್ರತಿ ನಡೆಸುತ್ತಿರುವ ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ 2010ರ ಸರ್ವಾಧ್ಯಕ್ಷರಾಗಿ ಪ್ರಸಿದ್ಧ ಲೇಖಕಿ ವೈದೇಹಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ .
ಸಮ್ಮೇಳನವು ಅಕ್ಟೋಬರ ತಿಂಗಳ 29, 30 ಮತ್ತು 31ರ ಶುಕ್ರ, ಶನಿ ಮತ್ತು ಭಾನುವಾರಗಳಂದು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ನಡೆಯಲಿದೆ.
ಕನ್ನಡ ಮನಸ್ಸು: ಜೀವನ ಮೌಲ್ಯಗಳು ಎಂಬ ಪ್ರಧಾನ ಪರಿಕಲ್ಪನೆಯಡಿ ಈ ಬಾರಿಯ ಸಮ್ಮೇಳನ ನಡೆಯಲಿದೆ ಎಂದು ಅವರು ಹೇಳಿದರು

ಅವಿಭಜಿತ ದಕ್ಷಿಣ ಕನ್ನಡದ ಹೆಸರಾಂತ ಸಾಹಿತಿ, ಇತ್ತೀಚೆಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಪುರಸ್ಕಾರವನ್ನು ತಮ್ಮ ಕ್ರೌಂಚ ಪಕ್ಷಿಗಳು ಸಂಕಲನಕ್ಕೆ ಪಡೆದಿರುವ ವೈದೇಹಿಯವರು ಆಳ್ವಾಸ್ ನುಡಿಸಿರಿಯ ಅಧ್ಯಕ್ಷತೆಯನ್ನು ವಹಿಸುವುದು ನಮಗೆ ಅತ್ಯಂತ ಸಂತೋಷವನ್ನುಂಟುಮಾಡಿದೆ. ಅವರು ಅಕ್ಟೋಬರ 29ರಂದು ಬೆಳಗ್ಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷರ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ಡಾ.ಎಂ.ಮೋಹನ ಆಳ್ವ ತಿಳಿಸಿದರು.
ಈ ಬಾರಿಯ ಸಮ್ಮೇಳನವು ನುಡಿಸಿರಿಯ ಏಳನೇ ಸಮ್ಮೇಳನವಾಗಿದ್ದು ಈ ಹಿಂದಿನ ವರ್ಷಗಳಲ್ಲಿ ಬರಗೂರು ರಾಮಚಂದ್ರಪ್ಪ, ಚೆನ್ನವೀರ ಕಣವಿ, ಎಸ್ ಎಲ್ ಭೈರಪ್ಪ, ಚಂದ್ರ ಶೇಖರ ಕಂಬಾರ, ಜಿ. ವೆಂಕಟಸುಬ್ಬಯ್ಯ, ಹಂಪ ನಾಗರಾಜಯ್ಯ ಇವರು ಅಧ್ಯಕ್ಷತೆಯನ್ನು ವಹಿಸಿ ನುಡಿಸಿರಿಯನ್ನು ಮುನ್ನಡೆಸಿದ್ದರು.
ಮಾಹಿತಿ: ಹರೀಶ್ ಆದೂರ್

‍ಲೇಖಕರು avadhi

15 September, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

1 Comment

  1. ಆನಂದ ಕೋಡಿಂಬಳ

    ನುಡಿಸಿರಿ ಅಧ್ಯಕ್ಷರಾಗಿ ವೈದೇಹಿ ಅವರನ್ನು ಆಯ್ಕೆ ಮಾಡಿದ್ದು ಅತ್ಯಂತ ಸಮರ್ಪಕ ಮತ್ತು ಸೂಕ್ತವಾದ ನಿರ್ಧಾರ. ಇದಕ್ಕಾಗಿ ಡಾ. ಮೋಹನ ಆಳ್ವ ಮತ್ತು ನುಡಿಸಿರಿ ಬಳಗವನ್ನು ಅಭಿನಂದಿಸುತ್ತೇನೆ.
    ಈ ಸಲದ ಥೀಮ್ ‘ಜೀವನಮೌಲ್ಯ’ ಕೂಡ ಸಮಯೋಚಿತವಾಗಿದೆ. ಬದುಕಿನ ಸೊಕಾಲ್ಡ್ ಅರ್ಥ ಮತ್ತು ಮೌಲ್ಯಗಳು ಈ ವರ್ತಮಾನದಲ್ಲಿ ಕುಸಿಯುತ್ತಿವೆಯೇನೋ ಎಂಬ ಆತಂಕ ಎದುರಿಗಿರುವ ಸ್ಥಿತಿಯಲ್ಲಿ ಆ ಕುರಿತ ಚಿಂತನೆಯ ಅಗತ್ಯವಂತು ಇದ್ದೇ ಇದೆ. ಒಟ್ಟಿನಲ್ಲಿ ಸಂತಸ ತಂದಿದೆ.

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading