ಆಳ್ವಾಸ್ ಎಜುಕೇಷನ್ ಫೌಂಡೇಷನ್ ಆಶ್ರಯದಲ್ಲಿ ನಡೆಯಲಿರುವ ಎಂಟನೇ ವರುಷದ ” ಆಳ್ವಾಸ್ ನುಡಿಸಿರಿ-2011 ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಪುಸ್ತಕ ಪ್ರಕಾಶಕರು, ಮಾರಾಟಗಾರರು ಸಮ್ಮೇಳನದ ಮೂರು ದಿನಗಳ ಕಾಲ ಮೂಡಬಿದಿರೆಯ ವಿದ್ಯಾಗಿರಿಯಲ್ಲಿ ಪುಸ್ತಕ ಮಳಿಗೆ ತೆರೆಯಬಹುದಾಗಿದೆ. ಪ್ರತೀ ಮಳಿಗೆಗೆ ರು.500 ಶುಲ್ಕ ವಿಧಿಸಲಾಗುತ್ತದೆ. ರಾಜ್ಯ – ಹೊರ ರಾಜ್ಯಗಳಿಂದ ಕನ್ನಡಾಭಿಮಾನಿಗಳು , ವಿದ್ಯಾಥರ್ಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಳ್ವಾಸ್ ನುಡಿಸಿರಿ ಸಮ್ಮೇಳನದಲ್ಲಿ ಭಾಗವಹಿಸಲಿರುವುದರಿಂದಾಗಿ ಮೌಲ್ಯಯುತ ಪುಸ್ತಕಗಳನ್ನೊಳಗೊಂಡ ಪುಸ್ತಕ ಪ್ರದರ್ಶನ ಮಾರಾಟ ವ್ಯವಸ್ಥೆ ಏರ್ಪಡಿಸುವುದು ಸಮ್ಮೇಳನದ ಸ್ವಾಗತ ಸಮಿತಿಯ ಚಿಂತನೆಯಾಗಿದೆ.ಎಂಟನೇ ವರುಷದ ಆಳ್ವಾಸ್ ನುಡಿಸಿರಿ ಸಮ್ಮೇಳನದ ಸವರ್ಾಧ್ಯಕ್ಷರಾಗಿ ಸಂಶೋಧಕ ಎಂ.ಎಂ.ಕಲಬುಗರ್ಿ ಸವರ್ಾನುಮತದಿಂದ ಆಯ್ಕೆಗೊಂಡಿದ್ದು ಆಳ್ವಾಸ್ ನುಡಿಸಿರಿ ಸಮ್ಮೇಳನವನ್ನು ನಡೆಸಿಕೊಡಲಿದ್ದಾರೆ.ಪುಸ್ತಕ ಮಳಿಗೆ ತೆರೆಯಲಿಚ್ಛಿಸುವವರು ರು.500ಮುಖ ಬೆಲೆಯ ಡಿ.ಡಿ.ಯನ್ನು ಆಳ್ವಾಸ್ ನುಡಿಸಿರಿ ಹೆಸರಿನಲ್ಲಿ ಪಡೆದು ಅಧ್ಯಕ್ಷರು, ಆಳ್ವಾಸ್ ಎಜುಕೇಷನ್ ಫೌಂಡೇಷನ್, ಆಳ್ವಾಸ್ ನುಡಿಸಿರಿ ಕಚೇರಿ, ಮೂಡಬಿದಿರೆ – 574227 ಇಲ್ಲಿಗೆ ಕಳುಹಿಸಬಹುದು. ಅಥವಾ ಆಳ್ವಾಸ್ ನುಡಿಸಿರಿ 2011ರ ಸ್ವಾಗತ ಸಮಿತಿಯ ಕಚೇರಿಯನ್ನು (ದೂರವಾಣಿ ಸಂಖ್ಯೆ: 08258 – 261229, 238104 – 111)ಸಂಪಕರ್ಿಸಬಹುದು.
0 ಪ್ರತಿಕ್ರಿಯೆಗಳು