ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಪೂರ್ಣ ಓದಿಗೆ: ಮೀಡಿಯಾ ಮೈಂಡ್

newspaperboat

ಅಂದಿಗೂ ಇಂದಿಗೂ ಬಹುಶಃ ಎಂದಿಗೂ, ಕನ್ನಡ ಚಾನೆಲ್ ಗಳಲ್ಲಿ ನುಗ್ಗಲು ‘ಈ ಟಿವಿ’ ಲಾಂಚ್ ಪ್ಯಾಡ್ ಆಗಿರುವಂತೆ ಪ್ರಿಂಟ್ ಮೀಡಿಯಾದಲ್ಲಿ ನುಗ್ಗಲು ವಿಜಯ ಟೈಮ್ಸ್ ಅದ್ಭುತ ವೇದಿಕೆ ಒದಗಿಸಿಕೊಡುತ್ತಿದ್ದ ಸಂದರ್ಭ. ವಿಜಯ ಟೈಮ್ಸ್ ನಲ್ಲಿ ಪ್ರಕಟಿತ ಪ್ರತಿ ಪದಕ್ಕೆ ಎಂಟಾಣೆ ಲೆಕ್ಕದಲ್ಲಿ ಸ್ಟ್ರಿಂಗರ್ ಆಗಿ ಸೇರಿದ್ದೆ. (ಪ್ರತಿ ಪದಕ್ಕೆ ಎಂಟು ಆಣೆ ಹಾಗೂ ಫೋಟೋ ಗೆ ಇದಕ್ಕಿಂತ ಜಾಸ್ತಿ. ಎಷ್ಟು ಎಂದು ಸರಿಯಾಗಿ ನೆನಪಿಲ್ಲ. ಆಶ್ಚರ್ಯವಾಯಿತೆ?) ನನ್ನ ಗೆಳೆಯರೆಲ್ಲ ನಾನು ಬಂದ ಕೂಡಲೇ ‘ಎಂಟಾಣೆಗೊಂದ್ ಎಂಟಾಣೆಗೊಂದ್’ ಎಂದು ಕಾಲೆಳೆಯುತ್ತಿದ್ದರು.

ಆದರೆ ಅದಾಗಿ ಮೂರೇ ದಿನಕ್ಕೆ ಅದೇ ವಿಜಯ ಟೈಮ್ಸ್ ನಲ್ಲಿ ಟ್ರೇನಿ ಜರ್ನಲಿಸ್ಟ್ ಆಗಿ ಸೇರಿದ್ದೆ. ವಾರ ಕಳೆಯುತ್ತಿದ್ದಂತೆ ಯುದ್ಧಭೂಮಿಗೆ ಕಳಿಸಲಾರಂಭಿಸಿದರು. ಭಾರೀ ಸಿದ್ಧತೆಯೊಂದಿಗೆ, ಶ್ರದ್ಧೆಯೊಂದಿಗೆ, ಭಯ-ಭಕ್ತಿಯೊಂದಿಗೆ ಪ್ರತಿನಿತ್ಯವೂ ಬೆಳಗಾ ಬೆಳಗಾ ಪ್ರೆಸ್ ಕ್ಲಬ್ಬಿಗೆ ಹೋಗಿ ಮಧ್ಯಾಹ್ನದವರೆಗೂ ಅಲ್ಲಿದ್ದು, ಬೇಕಾಗಿದ್ದ ಬೇಡವಾಗಿದ್ದ ಕನಿಷ್ಠ ಎಂಟು ಹತ್ತು ಪ್ರೆಸ್ ಕಾನ್ಫರೆನ್ಸ್ ಗಳನ್ನು ಕವರ್ ಮಾಡಿಕೊಂಡು ಆಫೀಸಿಗೆ ಮರಳಿ ಎಲ್ಲವನ್ನೂ ಶ್ರದ್ಧೆಯಿಂದ ಫೈಲ್ ಮಾಡುತ್ತಿದ್ದೆ. ಮಾರನೆ ದಿನ ಪೇಪರ್ ನಲ್ಲಿ ಒಂದೋ ಎರಡೋ ವರದಿಗಳು ಪ್ರಕಟವಾಗಿರುತ್ತಿದ್ದವು. ಇಂತಿಪ್ಪ ಸನ್ನಿವೇಶದಲ್ಲಿ ಪ್ರೇಸ್ ಕ್ಲಬ್ ಅಲ್ಲದೆ ಇತರ ಕಾರ್ಯಕ್ರಮಗಳಿಗೂ ನನ್ನನ್ನು ಕಳಿಸಿಕೊಡಲು ಆರಂಭಿಸಿದರು.

ಪೂರ್ಣ ಓದಿಗೆ: ಮೀಡಿಯಾ ಮೈಂಡ್

‍ಲೇಖಕರು avadhi

13 September, 2009

ನಿಮಗೆ ಇವೂ ಇಷ್ಟವಾಗಬಹುದು…

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಕುಮಾರ ರೈತ- ಸಂಕಥೆಯಿಂದ ಆತ್ಮಕಥನ; ಬದುಕಿನ ಕೊನೆ ಹಂತವೆನ್ನುವ ಸಾಮಾನ್ಯ ಭಾವನೆ ಇದೆ. ವಯಸ್ಸಿಗೂ ಅನುಭವಗಳಿಗೂ ಸಂಬಂಧವಿಲ್ಲ. ಬದುಕನ್ನು ನೋಡುವ ಸೀಮಿತ ದೃಷ್ಟಿಕೋನ ಕಳೆದುಕೊಳ್ಳಬೇಕು. ಹೀಗಾದಾಗ ಆತ್ಮಕಥನ; ಬದುಕಿನ ಕೊನೆ ಹಂತವಲ್ಲ’  ಇಂಥ ಅನೇಕ ಅನುಭವಗಳ ಕಥನ ಡೋರ್ ನಂಬರ್-142 ಕೃತಿಯಲ್ಲಿದೆ’  […]

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading