ಯೋಜನೆ
ನಾವಿಬ್ಬರು
ನಮಗಿಬ್ಬರು
ಮೂರಾಗದಂತೆ ರಬ್ಬರು
ಆ-ಶ್ರಮ
ಕಟ್ಟಾ ಬ್ರಹ್ಮಚಾರಿಯಾಗಿದ್ದವ
ಪ್ರಸ್ತದ ಮರುದಿನ
ಏದುಸಿರು ಬಿಡುತ್ತಾ ಹೇಳಿದ-
ಅಬ್ಬಾ! ಎಂಥಾ ಶ್ರಮ
ಈ ಗೃಹಸ್ಥಾಶ್ರಮ!
ಬದಲಾವಣೆ
ಕಾಶಿ, ರಾಮೇಶ್ವರ
ಎನ್ನುತ್ತಿದ್ದ ತಾತ
ಶುರುಮಾಡಿದ್ದಾನೆ ಈಗ
ಹೊಸ ವರಾತ:
ನೋಡಬೇಕಂತೆ ಸಿಮ್ಲಾ,
ಕಾಶ್ಮೀರ, ಆಗ್ರ
ಎಲ್ಲೋ ಸಿಕ್ಕಿರಬೇಕು
ವಯಾಗ್ರ!
ಹುಟ್ಟು
ಸರತಿ ಸಾಲು
ಶುರುವಾದದ್ದು
ದ್ವಾಪರ ಯುಗದಲ್ಲಿ
ಪಾಂಡುಪುತ್ರರಿಗೆ
ದ್ರೌಪದಿ ನುಡಿದಳು-
ಸ್ವಾಮಿ, ಕ್ಯೂ ನಿಲ್ಲಿ.
ಕದನ ವಿರಾಮ
ಗಂಡ ಹೆಂಡಿರ ಜಗಳ ಉಂಡು ಮಲಗುವ ವರೆಗೆ
ಆಮೇಲೆ ಕತ್ತಿ ಒರೆಗೆ!
ಮುಂದೆ
ಮೊದಲು ಎಲ್ಲರೂ ಮುಂದೆ ಬರುತ್ತಾರೆ
ಸಲಿಗೆ ಕೊಟ್ಟರೆ ಮುಂದುವರಿಸುತ್ತಾರೆ
ಅಕಸ್ಮಾತ್ ಮುಂದೆ ಬಂದರೆ
ಮುಂದೆ ಯಾರು ವರಿಸುತ್ತಾರೆ??
ಭಾವೈಕ್ಯ
ಭಾವೈಕ್ಯ ಭಾವೈಕ್ಯ
ಎಲ್ಲಿದೆ ಸ್ವಾಮಿ ಭಾವೈಕ್ಯ?
ಮನೆಗೆ ಹೋಗಿ ನೀವೇ ನೋಡಿ:
ಅಕ್ಕನ ಜೊತೆ ಭಾವ ಐಕ್ಯ!
ನಾಚುತ್ತಾ ಆಕೆ
ಎದೆಯ ಮೇಲಿನ ಹೊದಿಕೆ
ಸರಿಸುತ್ತಾ ಕೊಂಚ ಕೊಂಚವೇ ಬದಿಗೆ
ಪಾಡ್ಯ
ಬಿದಿಗೆ
ತದಿಗೆ
ಪೂರ್ಣಿಮೆ.





0 Comments