ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಪ್ರಹ್ಲಾದ ಅಗಸನಕಟ್ಟೆ ಸ್ಮರಣಾರ್ಥ ಕಥಾಸ್ಪರ್ಧೆ

ಹುಬ್ಬಳ್ಳಿಯ ಅಕ್ಷರ ಸಾಹಿತ್ಯ ವೇದಿಕೆಯು ಕನ್ನಡದ ಪ್ರಖ್ಯಾತ ಕಥೆಗಾರ ಡಾ. ಪ್ರಹ್ಲಾದ ಅಗಸನಕಟ್ಟೆಯವರ ಸ್ಮರಣಾರ್ಥವಾಗಿ, ಕಳೆದ ವರ್ಷದಂತೆ ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ/ನಿ ಕಥಾ ಸ್ಪರ್ಧೆಯನ್ನು ಏರ್ಪಡಿಸಿದ್ದು, ನಾಡಿನ ೨೫ ರೊಳಗಿನ ವಯೋಮಾನದ ಎಲ್ಲ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.

ಆಯ್ಕೆಯಾದ ಕಥೆಯೊಂದು ರೂ. ೫೦೦೦/- ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದ್ದು, ಡಾ. ಪ್ರಹ್ಲಾದರ ಜನ್ಮದಿನವಾದ ಜೂನ್ ೩ ರಂದು ಬಹುಮಾನವನ್ನು ವಿತರಿಸಲಾಗುವುದು ಹಾಗೂ ಪ್ರಹ್ಲಾದರ ಸಾಹಿತ್ಯದ ಕುರಿತಾದ ವಿಚಾರ ಸಂಕಿರಣವನ್ನೂ ಹಮ್ಮಿಕೊಳ್ಳಲಾಗುವುದು ಎಂದು ಅಕ್ಷರ ಸಾಹಿತ್ಯ ವೇದಿಕೆ, ಹುಬ್ಬಳ್ಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಉದಯೋನ್ಮುಖ ಕತೆಗಾರರು ತಮ್ಮ ಕಾಲೇಜಿನ ಮುಖ್ಯಸ್ಥರಿಂದ ಪಡೆದ ನಮ್ಮ ಕಾಲೇಜಿನ ವಿದ್ಯಾರ್ಥಿ/ನಿ ಎಂಬ ದೃಢೀಕೃತ ಪ್ರಮಾಣ ಪತ್ರದೊಂದಿಗೆ ತಮ್ಮ ಅಪ್ರಕಟಿತ ಸ್ವರಚಿತ ಕಥೆಯೊಂದನ್ನು ಕಳುಹಿಸಬೇಕು.

ವಿ.ಸೂ : ಕತೆಗಳನ್ನು ಕಾಗದದ ಒಂದೇ ಮಗ್ಗುಲಿಗೆ ಕಾಗುಣಿತ ತಪ್ಪಿಲ್ಲದೇ ಶುದ್ಧವಾಗಿ ಬರೆದು ಕಳಿಸಿ ಅಥವಾ ಟೈಪ್ ಮಾಡಿ ಕಳಿಸಿ. ಮೇಲ್ ಮೂಲಕವೂ ಕತೆಯನ್ನು ಸ್ವೀಕರಿಸುತ್ತೇವೆ. ಮೇಲ್ ಜೊತೆಯಲ್ಲೂ ದೃಢೀಕೃತ ಪ್ರಮಾಣ ಪತ್ರದ ಲಗತ್ತಿರಲಿ.

ಕಥೆ ಕಳುಹಿಸಲು ಕೊನೆಯ ದಿನಾಂಕ : ೩೦ ಜನವರಿ ೨೦೨೦
ಕಥೆ ಕಳುಹಿಸಬೇಕಾದ ವಿಳಾಸ :
ಡಾ. ಪ್ರಹ್ಲಾದ ಅಗಸನಕಟ್ಟೆ ಸ್ಮರಣಾರ್ಥ ವಿದ್ಯಾರ್ಥಿ/ನಿ ಕಥಾಸ್ಪರ್ಧೆ,

ಅಕ್ಷರ ಸಾಹಿತ್ಯ ವೇದಿಕೆ, ಹುಬ್ಬಳ್ಳಿ,

c/o ಸುನಂದಾ ಪ್ರಕಾಶ ಕಡಮೆ,

೯೦, ನಾಗಸುಧೆ ೬/ಬಿ ಕ್ರಾಸ್, ಕಾಳಿದಾಸನಗರ, ವಿದ್ಯಾನಗರ ವಿಸ್ತೀರ್ಣ, ಹುಬ್ಬಳ್ಳಿ- ೫೮೦೦೩೧,

ದೂರವಾಣಿ : ೯೮೪೫೭೭೯೩೮೭

ಮೇಲ್ ವಿಳಾಸ: sunandakadame@gmail.com

‍ಲೇಖಕರು

20 December, 2019

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading