ಬಂದಿದೆ ಹೊಸ ಮೀಡಿಯಾ ಮಿರ್ಚಿ

ಸಾರ್ ಯಾಕೆ ನೀವು ಆಟೋಬಯಾಗ್ರಫಿ ಬರೆಯಬಾರದು ? ಅನ್ನುವ ಪ್ರಶ್ನೆಯನ್ನು ನಾನು ಮುಂದಿಟ್ಟದ್ದು ರಾಮೋಜಿ ರಾವ್ ಅವರಿಗೆ. ಹಾಗೆ ಕೇಳಲು ನನಗೆ ಸಾಕಷ್ಟು ಕಾರಣಗಳಿತ್ತು. ರಾಮೋಜಿರಾಯರ ಜೊತೆ ಮಾತಿಗೆ ಕೂತಾಗಲೆಲ್ಲ ಅವರ ನೆನಪುಗಳು ಪ್ರವಾಹದಂತೆ ನುಗ್ಗಿ ಬರುತ್ತಿದ್ದವು. ಅಲ್ಲಿ ಉಪ್ಪಿನಕಾಯಿಯೂ ಇತ್ತು. ಪತ್ರಿಕೋದ್ಯಮವೂ ಇತ್ತು. ಚಿಟ್ ಫಂಡ್ ಇತ್ತು, ಹೋಟೆಲ್ ಗಳಿದ್ದವು, ವಿಶಾಖಪಟ್ಟಣ, ಕೃಷ್ಣಾ, ತೆಲಂಗಾಣಗಳಿದ್ದವು. ಎನ್ ಟಿ ರಾಮರಾವ್, ಚಂದ್ರಬಾಬು ನಾಯ್ಡು, ವೈ ಎಸ್ ರಾಜಶೇಖರ ರೆಡ್ಡಿಯೂ ಇದ್ದರು.ಅವರ ಜೊತೆಗೆ ಮಾತಿಗೆ ಕುಳಿತಾಗೆಲ್ಲ ನನಗೆ ಒಂದು ಹೊಸ ಜಗತ್ತು ಬಿಚ್ಚಿಕೊಳ್ಳುತ್ತಾ ಹೋಗುತ್ತಿತ್ತು. ನಾನು ಆ ದಿನ ಚರ್ಚಿಸಬೇಕಾಗಿದ್ದದ್ದನ್ನೆಲ್ಲ ಪಟ್ಟಿ ಮಾಡಿ ಅವರ ಚೇಂಬರ್ ಹೊಕ್ಕರೆ ಹೊರಬರುತ್ತಿದ್ದುದು ಒಂದು ದೊಡ್ಡ ಅನುಭವದೊಂದಿಗೆ. ಎಷ್ಟೋ ದಿನಗಳಿಂದ ಅವರು ತಮ್ಮೊಳಗೆ ಬಚ್ಚಿಟ್ಟುಕೊಂಡಿದ್ದಾರೇನೋ ಎನ್ನುವ ಅನುಭವ ಆಗ ಹೊರಗೆ ಇಣುಕುತ್ತಿತ್ತು. ಪೂರ್ಣ ಓದಿಗೆ : ಮೀಡಿಯಾ ಮೈಂಡ್]]>

‍ಲೇಖಕರು G

December 13, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

Sugata recommends..

Sugata recommends..

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: