ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಬನ್ನಿ ಒಂದಿಷ್ಟು ಕುಬ್ಜರಾಗೋಣ..


ಇಂದು, 27.03.10 ರಂದು ಜಾಗತಿಕ ತಾಪಮಾನ ಕುರಿತಂತೆ ಜಗತ್ತಿನಾದ್ಯಂತ
“Earth Hour” ಆಚರಿಸಲಾಗುತ್ತಿದೆ..ಇಂದು ಜಗತ್ತಿನಲ್ಲೆಡೆ ರಾತ್ರಿ 8.30 ರಿಂದ 9.30 ರ ವರೆಗೆ
ಎಲ್ಲ ರೀತಿಯ electricity dependents ಗಳನ್ನು switchoff ಮಾಡಲಾಗುತ್ತಿದೆ.
ನಾವೂ ಕೂಡ ಇಂಥದೊಂದು ಚಳುವಳಿಯಲ್ಲಿ ಭಾಗವಹಿಸಬಹುದು;
ನಮ್ಮ ನಮ್ಮ ಅವಶ್ಯಕತೆಗಳನ್ನು ಕೊಂಚ ಕುಬ್ಜವಾಗಿಸುವದರ ಮೂಲಕ!
ಬನ್ನಿ,ಮುಕ್ತ ಮನಸ್ಸಿನಿಂದ ಪಾಲ್ಗೊಳ್ಳೋಣ..
-ಟಿ ಜಿ ಬಾಲಕೃಷ್ಣ
-ರಾಘವೇಂದ್ರ ಜೋಶಿ

‍ಲೇಖಕರು avadhi

27 March, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

4 Comments

  1. malathi S

    We switched off power yesterday evening for an hour from 8.30 to 9.30. tried to do our bit for the environment
    🙂
    malathi S

  2. ಅಶೋಕವರ್ಧನ ಜಿ.ಎನ್

    ಮೊನ್ನೆ ನೆಹರೂ ಮೈದಾನದಲ್ಲಿ ರಾವಣನ ಭಾರೀ ಬೊಂಬೆ ನಿಲ್ಲಿಸಿದ್ದರು. ರಾತ್ರಿ ಯಾವುದೋ ಜಗದ್ಗುರುವಿನ ಮತ್ತದೇ ಧುಷ್ಟ ಶಿಕ್ಷಣ, ಶಿಷ್ಟರಕ್ಷಣದ ‘ಅದ್ಭುತ’ ಸಾಂಕೇತಿಕತೆಯ ಭಾಷಣದ ಕೊನೆಯಲ್ಲಿ ರಾವಣನಿಗೆ ಬೆಂಕಿ ಹಚ್ಚಿ ಭಸ್ಮ ಮಾಡಿದರು. ಗೋರಿಗಳ ನಗರ ದಿಲ್ಲಿಯಲ್ಲಂತೂ ಸಾವಿರದೊಂದು ಸಾಂಕೇತಿಕ ಆಚರಣೆಗಳು ಸತ್ತ ಎಲ್ಲರ ಬಗ್ಗೆ ನಡೆಯುತ್ತಲೇ ಇರುವುದನ್ನು ನಾವು ನೋಡಿ ನೋಡಿಯೇ ಬಳಲುತ್ತಿರುತ್ತೇವೆ. ಮೂವತ್ತು ಮೀಟರಿಗೊಂದು ಹೈಮಾಸ್ಟ್ ದೀಪ ಹಚ್ಚಿ, ಬಸ್ ನಿಲ್ಲದ ‘ಸ್ಟಾಪು’ಗಳಲ್ಲೆಲ್ಲ ಝಗಮಗಿಸುವ ಜಾಹೀರಾತು ಇಟ್ಟು ಎಲ್ಲೋ ಚೂರುಪಾರು ಮಂದಿ ಒಂದು ಗಂಟೆ ಕತ್ತಲಲ್ಲಿ ಕೂರುವ ಸಾಂಕೇತಿಕತೆ ಒಂದು ವಾರ್ಷಿಕ ವಿಧಿಯಾಗುತ್ತಿರುವುದು ನನಗೆ ಒಪ್ಪಿಗೆಯಿಲ್ಲ. ನಾನು ಎಂದಿನಂತೆ ನನ್ನ ಕೋಣೆಯ ದೀಪ, ಫ್ಯಾನ್ ಹಾಕಿ ಗಣಕ ಕಾರ್ಯ ನಿರತನಾಗಿದ್ದೆ. ಹೆಂಡತಿ ಎಂದಿನಂತೆ ಅವಳ ಕಾರ್ಯರಂಗದ ಜಾಗದ ದೀಪ ಮಾತ್ರ ಹಚ್ಚಿಕೊಂಡು ಅವಳ ಕಾರ್ಯನಿರತಳಾಗಿದ್ದಳು.
    ಅಶೋಕವರ್ಧನ

  3. ಸುಘೋಷ್ ಎಸ್. ನಿಗಳೆ

    ನಾವಿರುವುದು ಬನಶಂಕರಿಯ ಸೋಕಾಲ್ಡ್ ಎಜುಕೇಟೆಡ್ ಬೀದಿಯಲ್ಲಿ. ಆದರೆ ದುರಂತ, ನಮ್ಮ ಬೀದಿಯಲ್ಲಿ ಲೈಟ್ ಸ್ವಿಚ್ ಮಾಡಿದ್ದು ಕೇವಲ ನಾವು ಹಾಗೂ ನಮ್ಮ ಮುಂದಿನ ಮನೆಯವರು ಮಾತ್ರ. ಆದರೆ ಲೈಟ್ ಸ್ವಿಚ್ ಮಾಡಿ ಅರ್ತ್ ಅವರ್ ಆಚರಿಸಿದುದರ ಬಗ್ಗೆ ನನಗೆ ಹೆಮ್ಮೆಯಿದೆ.

  4. nagesh hegde

    ನಾವಿರುವ ಹಳ್ಳಿಮನೆಯಲ್ಲಿ ಸಂಜೆ ಏಳೂವರೆಗೇ ಕರೆಂಟ್ ಹೋಗಿತ್ತು. ದೂರ ದಿಗಂತದಲ್ಲಿ ಕಾಣುತ್ತಿದ್ದ ಬೆಂಗಳೂರಿನ ಧ್ರುವಪ್ರಭೆ ಕೂಡ ಮಂಕಾಗಿತ್ತು. ಬೆಸ್ಕಾಮ್ ಖುದ್ದಾಗಿ ಎಲ್ಲೆಡೆ ‘ಅರ್ಥ್ ಅವರ್’ ಆಚರಿಸುತ್ತಿದೆ ಎಂದು ಅಂದುಕೊಂಡು ರೇಡಿಯೊ ಕೇಳುತ್ತ ಕೂತಿದ್ದಾಗ ಏನಚ್ಚರಿ, ಸರಿಯಾಗಿ ಎಂಟೂವರೆಗೆ ಕರೆಂಟ್ ಬಂತು! ಇದಪ್ಪಾ ಚಮತ್ಕಾರ ಎಂದುಕೊಂಡು ನನ್ನ ಪತ್ನಿ ಸ್ವಿಚಾಫ್ ಮಾಡಿದಳು. ನಮ್ಮ ಕರೆಂಟ್ ಬಿಲ್ ತಿಂಗಳಿಗೆ ಯಾವತ್ತೂ ನೂರು ರೂಪಾಯಿ ತಲುಪದಂತೆ ಮಿತವಾಗಿ ಬಳಸುತ್ತಲೇ ಬಂದಿರುವ ನಮಗೆ ಮತ್ತೆ ಒಂದು ಗಂಟೆ ಕತ್ತಲಲ್ಲಿ ಕೂತಿರಬೇಕಾದ ನೈತಿಕ ಹರ್ಕತ್ತೇನೂ ಇರಲಿಲ್ಲ. ಆದರೆ ಕತ್ತಲನ್ನು ಆವಾಹಿಸುವ ಮೂಲಕ ವಿದ್ಯುತ್ ದುಂದುಗಾರರಿಗೆ ತುಸು ಬೆಳಕು ತೋರುವ ಈ ಅಭಿಯಾನಕ್ಕೆ ನಮ್ಮ ಬೆಂಬಲವಿದೆ.
    -ನಾಗೇಶ ಹೆಗಡೆ

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading