ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಬನ್ನಿ ಜಗದೋದ್ಧಾರಕರ ಅನಗತ್ಯವಾಗಿಸುವ…

ಸಮಾನತೆಗಾಗಿ

ಅನಿಲ್ ತಾಳಿಕೋಟೆ

 
ರಾಮಕೃಷ್ಣ ಗರ್ಭದ ಕಲ್ಲಾದ
ಬುದ್ದ ಬಸವಳಿದು ಬಿದ್ದ
ಅಲ್ಲಮ ಮೆಲ್ಲನೆದ್ದು ಹೋದ
ಮೋಹನದಾಸನಾಶಿಸುತ್ತ ಅಸುನೀಗಿದ
ವಿವೇಕ ಬಾಬಾ ನಿಟ್ಟುಸಿರಿಟ್ಟು ನಡೆದ
ಮಳೆ ಸುರಿಯಿತು ಮರುಭೂಮಿಯ ಮೇಲೆ
ಕೊಳೆ ಬೆಳೆಯಿತು ಮನುಜರರಿವಿನೊಳಗೆ
ಬರಬೇಕಾದವರೆಲ್ಲಾ ಬಂದು ಹೋದರು
ಕೊಡಬೇಕಾದದ್ದೆಲ್ಲಾ ಕೊಟ್ಟು ಕಂಗೆಟ್ಟರು
ಎಲ್ಲರನ್ನಟ್ಟಿ ಇನ್ನೂ ನಿಂತಿಹರು ದಾರಿಗೆಟ್ಟವರು.

 
ನ ಹನ್ಯತೆ ಅಸಮಾನತೆ
ಕೊಲ್ಲಬಂದವರೆಲ್ಲಾ ಕಾಲವಾದರೂ
ಕಾಲೂರಿಕೊಂಡ ಕೊಳೆತದ ನಾತ
ನೈನಂ ಛಿಂದಂತಿ ಶಸ್ತ್ರಾಣಿ ಈ ಜಾತಿಯತೆ
ಬದಲಾಗಬೇಕಾದದ್ದು ಬೆಂಕಿ ಗಾಳಿ ಮಳೆಯಲ್ಲ
ಮನೆ ಮನೆಗಳಲ್ಲಿ ಮುದುಡಿದ ಮನಗಳು
ತೆರೆ ತೆರೆದ ಕಿಂಡಿಗಳಿಂದ ಹೊರ ಹೊರಡಲಿ
ಕುಲ ಕುಲವೆನ್ನುವ ಕಾರಿರುಳು
ಒಳ ಹರಡಲಿ ಕಾಂತಿಯ ಸುಡುನೆರಳು
ಸಹಜಾತಿ ಸುಖಕಿಂತ ಮಿಗಿಲು ಮಾನವೀಯತೆ
 
ಮೂರನೂರು ಉಂಡ ಹೊಟ್ಟೆಗಳ
ತಣಿಸುವದಕ್ಕಿಂತ ಮಿಗಿಲು
ಮೂರು ದಣಿದ ಮೈಗಳಿಗೆ
ಸಂತೈಸುವೆರೆಡು ಕೈಗಳು
ಸಾವಿರ ಪುಟಗಳ ಸಮೃದ್ಧ
ಸಮಾನತೆಯ ಸಾಹಿತ್ಯಕ್ಕಿಂತವಧಿಕ
ಒಬ್ಬ ಬಡವನ ಕಣಿವೆಯೊಡಲಲ್ಲಿ
ಬೆಳೆ ನಳಿನಳಿಸುವದು
ಬವಣೆಯ ಕಳೆ ಕೀಳುವದು
ಬನ್ನಿ ಜಗದೊಧ್ಧಾರಕರ ಅನಗತ್ಯವಾಗಿಸುವ.
 

‍ಲೇಖಕರು avadhi

6 May, 2014

3 Comments

  1. Rishi

    Good one

  2. narayan raichur

    cgennagide, olleya vichaaara, niroopaneyoo hidisitu ; theory ginta practical aagona yemba aashaya uttama !!!

  3. mmshaik

    nice..uttama kavite..

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading