ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವಿವಿಧ ವಾರ್ಷಿಕ ಪ್ರಶಸ್ತಿಗಳ ಪಟ್ಟಿ ಪ್ರಕಟ
‘ಕಣ್ವ ವರ್ಷದ ಪ್ರಕಾಶಕ’ ಪ್ರಶಸ್ತಿಗೆ ಅಂಕಿತ ಪುಸ್ತಕ ಪ್ರಕಾಶನದ ʼಪ್ರಕಾಶ್ ಕಂಬತ್ತಳ್ಳಿʼ , ‘ಹೇಮಂತ ವರ್ಷದ ಲೇಖಕ ಪ್ರಶಸ್ತಿ’ಗೆ ಡಾ. ಸಿ ಚಂದ್ರಪ್ಪ ಹಾಗೂ ‘ಸಪ್ನಾ ವರ್ಷದ ಯುವ ಲೇಖಕ ಪ್ರಶಸ್ತಿ’ಗೆ ಕಪಿಲ ಪಿ ಹುಮನಾಬಾದೆ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ತಲಾ ೧೦ ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿವೆ.
ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ ಹಾಗೂ ಕಾರ್ಯದರ್ಶಿ ಆರ್ ದೊಡ್ಡೇಗೌಡ ಅವರು, ೨೦೨೧ರ ಫೆಬ್ರವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 ಪ್ರತಿಕ್ರಿಯೆಗಳು