ಸಾಹಿತ್ಯ ಸಮ್ಮೇಳನದಲ್ಲಿ ಸುತ್ತು…
ಕನ್ನಡ ಸಾಹಿತ್ಯ ಸಮ್ಮೇಳನ ಆರಂಭದ ದಿನ ಬೆಳ್ಳಂಬೆಳಗ್ಗೆಯೇ ತುರ್ತು ಕಾರ್ಯದ ನಿಮಿತ್ತ ಬೆಂಗಳೂರಿಂದ ಹೊರಗೆ ಹೋಗಬೇಕಾಗಿ ಬಂತು. ಎಲ್ಲವನ್ನೂ ಮುಗಿಸಿ ಬಸವನಗುಡಿ ನ್ಯಾಷನಲ್ ಕಾಲೇಜು ಬಳಿ ಬಂದಾಗ ಮೆರವಣಿಗೆ ಬೆವರು ಇಳಿಸಿಯಾಗಿತ್ತು. ಶೃಂಗರಿಸಿಕೊಂಡಿದ್ದ ಆನೆಗಳು, ಕುದುರೆಗಳು ಕಾಲೆಳೆದುಕೊಂಡು ಬದಿಗೆ ಸರಿದಿದ್ದವು.
ಅಧ್ಯಕ್ಷರನ್ನು ಹೊತ್ತ (ಸಾರೋಟು) ವಾಹನ ಇನ್ನೇನು ಒಳ ಪ್ರವೇಶ ಪಡೆಯುವ ತರಾತುರಿಯಲ್ಲಿತ್ತು. ಅಷ್ಟು ಹೊತ್ತಿಗೇ ಅಭಿಮಾನಿಗಳು, ಕನ್ನಡದ ಕಟ್ಟಾಳುಗಳೆಲ್ಲ ಮುತ್ತಿಗೆ ಹಾಕಿದ್ದರು. ಪರಿಷತ್ ಅಧ್ಯಕ್ಷ ನಲ್ಲೂರು ಪ್ರಸಾದ್ ಹೇಗೋ ಮಾಡಿ ಕೆಳಗೆ ಇಳಿದಿದ್ದರು. ಹಿರಿಯ ಜೀವ ವೆಂಕಟಸುಬ್ಬಯ್ಯನವರಿಗೆ ಅದು ಕಷ್ಟವಾಯಿತು.
ಹೇಗೋ ಮಾಡಿ ಅಧ್ಯಕ್ಷರನ್ನು ಹಿಂಭಾಗಿಲಿನಿಂದ ಪ್ರಧಾನ ವೇದಿಕೆಗೆ ಕರೆದೊಯ್ಯಲಾಯಿತು. ಪೊಲೀಸರು, ಕಾರ್ಯಕರ್ತರು ನಿಟ್ಟುಸಿರು ಬಿಟ್ಟರು.
ಮುಂದೆ ಪ್ರಧಾನ ವೇದಿಕೆಯಲ್ಲಿ ಭಾಷಣಗಳು ಶುರುವಾದವು…. ಸಭಾಂಗಣದ ಮೂರು ದಿಕ್ಕಿನಲ್ಲಿ ಜನವೋ ಜನ. ಎಲ್ಲಿಂದ ಇಣುಕಿದರೂ ವೇದಿಕೆಯಲ್ಲಿ ಯಾರಿದ್ದಾರೆ ಎಂಬುದೇ ಕಾಣಿಸದ ಸ್ಥಿತಿ. ಧೂಳೋ ಧೂಳು…!
ಅಧ್ಯಕ್ಷರು ಆಕಡೆ ವೇದಿಕೆ ಹತ್ತಿದ ಕೂಡಲೇ ಮೆರವಣಿಗೆಯ ಉದ್ದಕ್ಕೂ ಅವರ ಹಿಂದೆಯೇ ಬಂದಿದ್ದ ಅನೇಕ ಮಂದಿ
ಈ ಕಡೆ ಭಾಷಣದ ಭರಾಟೆ ಆರಂಭವಾಗುತ್ತಿದ್ದಂತೆ ಜನಸಾಗರದಿಂದ ತಪ್ಪಿಸಿಕೊಳ್ಳಲು ಸಾಹಿತ್ಯ ಪ್ರಿಯರು,
ಪುಸ್ತಕ ಮಳಿಗೆಗಳಲ್ಲಿ ತಾಸುಗಟ್ಟಳೆ ಅಡ್ಡಾಡಿದೆ. ಕಾಣದೇ ಮರೆಯಾಗಿದ್ದ ಅನೇಕ ಮಂದಿ ಮಿತ್ರರು ಸಿಕ್ಕರು.
ಬರೆದದ್ದು ಚೆನ್ನಾಗಿದೆ. ವಿಷಯ ದಾಹಕ್ಕೆ ಇನ್ನೂ ಕೊರತೆ…