ಮತ್ತವನ  ಫೋಟೊ..

ಶೋಷಿತಳ ಸ್ವಗತ

ಮನು ಪುರ

ಮೊಳ ಮಲ್ಲಿಗೆ ಮುಡಿದು
ಕಣ್ಣೀರ ಗುರುತನಳಿಸಿ
ಸಿಂಗಾರಗೊಂಡು
ಎದೆಸೀಳು ಕಾಣುವಂತೆ
ಸೆರಗಸುತ್ತಿ-ಕಾಯುತಿರುವೆ
ದೇಹಕೆ ಬೆಲೆ ಕಟ್ಟುವವನಿಗಾಗಿ

ಮನಸು ಇನ್ನು ಶುದ್ಧವೆ
ಒಮ್ಮೆಯೂ ಸುಖಿಸಿಲ್ಲ
ಹೊಟ್ಟೆಪಾಡಿನ ಕಸುಬಿದು
ಎಲ್ಲ ಮುಗಿದ ಮೇಲೂ
ಏನೊಂದು ಅರಿವಾಗದು .

ಅವಸರಕೆ ಸಿಕ್ಕ ದೇಹ
ಕಬ್ಭಿನಂತೆ ಹಿಂಡಿದಷ್ಟೇ
ಒಳಗಣ ನೋವು
ಒಬ್ಬರಿಗೂ ಕಾಣಲಿಲ್ಲ
ಕಂಡಿದ್ದರೆ …..
ನಾನೆಂದೊ ಗರತಿಯಾಗುತಿದ್ದೆ.

ಪಾಪ ಪುಣ್ಯದ ಮಾತಿಂದ
ಬದುಕು ತಾ ನಡೆದೀತೆ?
ವಿಧಿಯ ಮುಂದೆ ವಿವಸ್ತ್ರಳಾಗಿ
ಭಾವನೆಗಳ ಕತ್ತು ಹಿಸುಕಿ
ಗೊಂಬೆಯಂತೆ
ಮಾರಾಟದ ಸರಕಾಗಿಬಿಟ್ಟೆ
ಹಾಳು ಗಂಡು ಜನ್ಮಕೆ.

ತಿಂದುಂಡು ತೇಗಿದವರಿಗಿಲ್ಲದ
ಕಳಂಕ
ಇಲ್ಲಿಯೂ ನೊಂದವಳಿಗಂಟಿತು
ಈ ಸಮಾಜವೇ ಹೀಗೆ
ಬೇಕೆಂದೇ ಕಟ್ಟಿ ಬಿಡುತ್ತದೆ
ತನ್ನೆಲ್ಲ ಕೊಳಕ
ಪಾಪದವರ ತಲೆಗೆ

ಬಂದು ಹೋದವರಿಗೆ ಲೆಕ್ಕವಿಲ್ಲ
ಹಾಗಂತ
ಸಾಲು ಸಾಲು ಬಂಗಲೆಗಳು ನನಗಿಲ್ಲ
ಈಗಲೂ ಅದೇ ಚರಂಡಿ ಬಳಿಯ
ಹಳೆಯ ಗುಡಿಸಲು -ಮತ್ತವನ  ಫೋಟೊ
ಅತ್ತು ಬರಿದಾಗಲು ಉಳಿದದ್ದು.

‍ಲೇಖಕರು Avadhi Admin

April 27, 2019

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: