‘ಬಹುರೂಪಿ’ ಪ್ರಕಟಣೆಯ, ಹಿರಿಯ ಪತ್ರಕರ್ತ ಶರತ್ ಎಂ ಎಸ್ ಅವರ ‘ಮನಿ ಸೀಕ್ರೆಟ್ಸ್ ಮತ್ತು ಸ್ಟಾಕ್ ಮಾರ್ಕೆಟ್ ಸೀಕ್ರೆಟ್ಸ್’ ಕೃತಿ ಬಿಡುಗಡೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಹುರೂಪಿ ಜಂಟಿಯಾಗಿ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ವಿಸ್ತಾರ ನ್ಯೂಸ್ ನ ಸಿಇಒ ಹಾಗೂ ಪ್ರಧಾನ ಸಂಪಾದಕರಾದ ಹರಿಪ್ರಕಾಶ್ ಕೋಣೆಮನೆ ಪುಸ್ತಕ ಬಿಡುಗಡೆ ಮಾಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅಧ್ಯಕ್ಷತೆ ವಹಿಸಿದ್ದರು. ವಿಜಯವಾಣಿ ಸಂಪಾದಕರಾದ ಕೆ.ಎನ್. ಚನ್ನೇಗೌಡ ಮತ್ತು ಫ್ರೀಡಂ ಆಪ್ ನ ಸಿಇಒ ಹಾಗೂ ಸಂಸ್ಥಾಪಕರಾದ ಸಿ.ಎಸ್. ಸುಧೀರ್ ಅವರು ಮುಖ್ಯ ಅತಿಥಿಗಳಾಗಿದ್ದರು, ಬಹುರೂಪಿಯ ಜಿ ಎನ್ ಮೋಹನ್ ಹಾಗೂ ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಜಿ ಸಿ ಲೋಕೇಶ್ ಉಪಸ್ಥಿತರಿದ್ದರು.
0 ಪ್ರತಿಕ್ರಿಯೆಗಳು