ಮಮತಾ ಅರಸೀಕೆರೆ, ಮಹಾಂತೇಶ ಪಾಟೀಲ್ ಗೆ ಗವಿಸಿದ್ಧ ಬಳ್ಳಾರಿ ಕಾವ್ಯ ಪ್ರಶಸ್ತಿ…

ರಾಜ್ಯಮಟ್ಟದಲ್ಲಿ ಪ್ರತಿ ವರ್ಷ ಕಾವ್ಯದ ಹಸ್ತಪ್ರತಿಗೆ ಕೊಡಮಾಡುವ ‘ಗವಿಸಿದ್ಧ ಎನ್. ಬಳ್ಳಾರಿ – ಕಾವ್ಯ ಪ್ರಶಸ್ತಿ’ಯು
ಈ ವರ್ಷ (2022 ನೇ ಸಾಲಿನ) ದಾವಣಗೆರೆಯ ಡಾ. ಮಹಾಂತೇಶ ಪಾಟೀಲ್ ರ ‘ಚಲಿಸುವ ಮೋಡಗಳು’ ಮತ್ತು ಮಮತಾ ಅರಸೀಕೆರೆಯವರ ‘ನೀರ ಮೇಲಿನ ಮುಳ್ಳು’ ಹಸ್ತಪ್ರತಿಗಳಿಗೆ ಲಭಿಸಿದೆ.

ಈ ವರ್ಷ ಒಟ್ಟು 61 ಹಸ್ತಪ್ರತಿಗಳು ಬಂದಿದ್ದವು. ಇವುಗಳಲ್ಲಿ – 10 ಹಸ್ತಪ್ರತಿಗಳು ಸೆಮಿಫೈನಲ್ ಸುತ್ತಿಗೆ ಮತ್ತು ನಂತರ 5 ಹಸ್ತಪ್ರತಿಗಳು ಕೊನೆಯ ಸುತ್ತಿಗೆ ಆಯ್ಕೆಯಾಗಿದ್ದವು.

ಹಿರಿಯ ಬಂಡಾಯ ಕವಿಗಳು, ಹೋರಾಟಗಾರರಾದ ಅಲ್ಲಮಪ್ರಭು ಬೆಟ್ಟದೂರ ಮತ್ತು ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿಗಳಾದ ಎಚ್.ಎಸ್. ಪಾಟೀಲರು ಕೊನೆಯ ಸುತ್ತಿನ ತೀರ್ಪುಗಾರರಾಗಿದ್ದರು.

ಪ್ರಶಸ್ತಿಯು ತಲಾ ಆರು ಸಾವಿರ ರೂಪಾಯಿ ನಗದು ಮತ್ತು ಫಲಕವನ್ನು ಒಳಗೊಂಡಿದ್ದು, ಪ್ರಶಸ್ತಿಯನ್ನು ಕೊಪ್ಪಳದಲ್ಲಿ ಅಕ್ಟೋಬರ್ 16, 2022 ರಂದು ನಡೆಯುವ ‘ಗವಿಸಿದ್ಧ ಎನ್. ಬಳ್ಳಾರಿ – ಸಾಹಿತ್ಯೋತ್ಸವ’ದಲ್ಲಿ ವಿತರಿಸಲಾಗುವುದು ಎಂದು ‘ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ’ಯ ಪರವಾಗಿ ಮಹೇಶ ಬಳ್ಳಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‍ಲೇಖಕರು Admin

June 22, 2022

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

  1. ಸುನಂದಾ ಕಡಮೆ

    ಅಕ್ಕರೆ ತುಂಬಿದ ಅಭಿನಂದನೆ ಪ್ರಿಯ ಮಮತಾ..

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: