ಕರ್ನಾಟಕ ಮಾಧ್ಯಮ ಅಕಾಡಮಿಯ 2012 ಮತ್ತು 2013ರ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಲ್ಲಿ ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ವಿತರಿಸಿದರು.
ಈಟಿವಿ ಕನ್ನಡ ಸುದ್ದಿವಾಹಿನಿ ಮುಖ್ಯಸ್ಥ, ಹಿರಿಯ ಪತ್ರಕರ್ತ ಜಿ.ಎನ್ ಮೋಹನ್, ಸುವರ್ಣ ನ್ಯೂಸ್ ಸಂಪಾದಕ ಅನಂತ್ ಚಿನಿವಾರ್, ವಿಜಯ ವಾಣಿ ಪತ್ರಿಕೆ ಸಂಪಾದಕ ತಿಮ್ಮಪ್ಪ ಭಟ್, ಜಸ್ಟ್ ಕನ್ನಡ ಡಾಟ್ ಇನ್ ಅಂತರ್ಜಾಲ ಸುದ್ದಿ ತಾಣದ ಸಂಪಾದಕ ಮಹೇಶ್ ಕುಮಾರ್ ಪ್ರಶಸ್ತಿ ಪಡೆದ ಪ್ರಮುಖರು.
ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ವಾರ್ತಾ ಮತ್ತು ಪ್ರಸಾರ ಇಲಾಖೆ ಖಾತಾ ಸಚಿವ ಆರ್.ರೋಷನ್ ಬೇಗ್, ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗರೆಡ್ಡಿ, ಲೋಕಸಭಾ ಸದಸ್ಯ ಪಿ.ಸಿ.ಮೋಹನ್ ವಿಧಾನ ಪರಿಷತ್ ಸದಸ್ಯ ಗೋವಿಂದ ರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಕೆ.ಆರ್.ನಿರಂಜನ್, ವಾರ್ತಾ ಇಲಾಖೆ ನಿರ್ದೇಶಕ ವಿಶು ಕುಮಾರ್, ಮಾಧ್ಯಮ ಅಕಾಡೆಮಿ ಅಧ್ಯಕ್ಷ ಪೊನ್ನಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸಮಾರಂಭದ ಕೆಲವು ದೃಶ್ಯಗಳು ನಿಮಗಾಗಿ :
ಚಿತ್ರಗಳು : ಶಿವು ಮೊರಿಗೇರಿ
ಚಿತ್ರಗಳನ್ನು ದೊಡ್ಡದಾಗಿ ನೋಡಲು ಅವುಗಳ ಮೇಲೆ ಕ್ಲಿಕ್ಕಿಸಿ :
sir,mattomme tamagella abhinandanegaLu..
yellarigu abhindanegalu