ಲಲಿತಾ ಸಿದ್ಧಬಸವಯ್ಯ ಹಾಗೂ ಸುರೇಶ್ ನಾಗಲಮಡಿಕೆ ಅವರಿಗೆ ಬಿಎಂಶ್ರೀ ಪ್ರತಿಷ್ಠಾನ ಪ್ರಶಸ್ತಿ

ಖ್ಯಾತ ಸಾಹಿತಿ ಲಲಿತಾ ಸಿದ್ಧಬಸವಯ್ಯ ಹಾಗೂ ಹೆಸರಾಂತ ವಿಮರ್ಶಕ ಸುರೇಶ ನಾಗಲಮಡಿಕೆ ಅವರಿಗೆ ಈ ಸಾಲಿನ ಬಿ ಎಂ ಶ್ರೀ ಪ್ರತಿಷ್ಠಾನದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರತಿಷ್ಠಾನ ಕೊಡಮಾಡುವ ‘ಡಾ ವಿಜಯಾ ಸುಬ್ಬರಾಜ್ ಗಣ್ಯ ಲೇಖಕಿ ಪ್ರಶಸ್ತಿ’ಗೆ ಲಲಿತಾ ಸಿದ್ಧಬಸವಯ್ಯ ಅವರನ್ನೂ ಹಾಗೂ ‘ಸೂ ವೆಂ ಆರಗ ವಿಮರ್ಶಾ ಪ್ರಶಸ್ತಿ’ಗೆ ಸುರೇಶ ನಾಗಲಮಡಿಕೆ ಅವರನ್ನೂ ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷರಾದ  ಡಾ ಆರ್ ಲಕ್ಷ್ಮೀನಾರಾಯಾಣ ಅವರು ತಿಳಿಸಿದ್ದಾರೆ.

ಚಿಂತಾಮಣಿ ಕೊಡ್ಲೆಕೆರೆ ಹಾಗೂ ಡಾ ಎಚ್ ಎಲ್ ಪುಷ್ಪ ಅವರಿದ್ದ ಆಯ್ಕೆ ಸಮಿತಿಯು ಲಲಿತಾ ಸಿದ್ಧಬಸವಯ್ಯನವರ ಸಾಹಿತ್ಯ ಸಾಧನೆಯನ್ನು ಗಣನೆಗೆ ತೆಗೆದುಕೊಂಡು ಪ್ರಶಸ್ತಿಗೆ ಆಯ್ಕೆ ಮಾಡಿತು.

ಡಾ ಎಚ್ ಎಸ್ ಮಾಧವರಾವ್ ಹಾಗೂ ಡಾ ಕೆ ಪಿ ಭಟ್ ಅವರಿದ್ದ ಆಯ್ಕೆ ಸಮಿತಿಯು ಸುರೇಶ ನಾಗಲಮಡಿಕೆ ಅವರ ‘ಹಲವು ಬಣ್ಣದ ಹಗ್ಗ’ ವಿಮರ್ಶಾ ಕೃತಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿತು

ಏಪ್ರಿಲ್ ೧೧ರಂದು ಬಿ ಎಂ ಶ್ರೀ ಪ್ರತಿಷ್ಠಾನದಲ್ಲಿ ಪ್ರಶಸ್ತಿಗಳನ್ನು ವಿತರಿಸಲಾಗುವುದು ಎಂದು ಲಕ್ಷ್ಮೀನಾರಾಯಣ ತಿಳಿಸಿದ್ದಾರೆ.

‍ಲೇಖಕರು avadhi

March 27, 2019

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: