ಶ್ರೀಶೈಲ ನಾಗರಾಳ ಕಂಡಂತೆ..
ಕವಿ, ವಿಮರ್ಶಕ, ಕೇಂದ್ರೀಯ ವಿಶ್ವವಿದ್ಯಾಲಯ ದ ಕನ್ನಡ ವಿಭಾಗದ ಪ್ರಾಧ್ಯಾಪಕ ವಿಕ್ರಮ ವಿಸಾಜಿ ಅನುವಾದಿಸಿದ ‘ಸಿಮೊನ್ ದ ಬೋವಾ ಮಾತುಕಥನ’ ಪುಸ್ತಕ ಬಿಡುಗಡೆ ಮಾಡಲಾಯಿತು.
ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕನ್ನಡ ಚಿತ್ರರಂಗದ ಯುವ ನಟ ಪುನೀತ್ ರಾಜಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮೌನಾಚರಣೆ ಮಾಡಲಾಯಿತು.
ಪಲ್ಲವ ಪ್ರಕಾಶನದ ಈ ಕೃತಿಯನ್ನು ಗುಲಬರ್ಗಾ ವಿಶ್ವವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥರಾದ ಪ್ರೊ ಪರಿಮಳ ಅಂಬೇಕರ್ ಕೃತಿ ಬಿಡುಗಡೆ ಮಾಡಿದರು.
ಕೇಂದ್ರೀಯ ವಿಶ್ವವಿದ್ಯಾಲಯದ ಡಾ ಬಸವರಾಜ ಡೋಣೂರ, ಡಾ ಕಿರಣ ಗಾಜನೂರು, ಡಾ ಎಂ ಮಹೇಂದ್ರ, ಕೃತಿಯ ಪ್ರಕಾಶಕರಾದ ಪಲ್ಲವ ವೆಂಕಟೇಶ್, ಕಲಬುರ್ಗಿ ವಿವಿಯ ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಪ್ರೊ ಎಚ್ ಟಿ ಪೋತೆ, ರಂಗ ತಜ್ಞ ಶಂಕ್ರಯ್ಯ ಘಂಟಿ ಭಾಗಿಯಾಗಿದ್ದರು.
ಕಾರ್ಯಕ್ರಮದ ಫೋಟೋ ಆಲ್ಬಮ್ ಇಲ್ಲಿದೆ.
0 ಪ್ರತಿಕ್ರಿಯೆಗಳು