
ಸಿದ್ದು ದೇವರಮನಿ
ಆ ಊರಲ್ಲಿ ಯುದ್ದ ಜಾರಿಯಲ್ಲಿದೆ
ಜಾತಿಯ ದುರಾಭಿಮಾನದಿ೦ದ
ಸಾಮರಸ್ಯದ ಸಾವಿನಿ೦ದ
ಮತಾ೦ಧತೆಗೆ ಮಾನವೀಯತೆ ಮಾತೆಲ್ಲಿ ಗೆಳೆಯ
ಅಬ್ಬರಿಸುವ ಕೋವಿಗೆ ಜೀವದ ಹ೦ಗೆಲ್ಲಿ ಗೆಳೆಯ
ಬರೀ ಬಾ೦ಬು ಹೊಗೆಯೆದ್ದು ಬಾನಿಗೆ ಪುಟಿದೇಳುತ್ತಿದೆ
ಕೂಳಿನ ಕೂಗು ಕಪ್ಪಡರಿದ ಕಾಮೊ೯ಡದಲಿ ಕರಗಿದೆ
ಕಾರಣ
ಮನ-ಮನಸುಗಳ ಪ್ರೀತಿ ಬಿರುಕಲ್ಲಿ ಬತ್ತಿದಕ್ಕೆ.
ನೀವಿಲ್ಲಿ ಅದೆಷ್ಟು ಭಾವೈಕತೆ ಬೆಳಸಿದ್ದೀರಿ
ಜಾತಿ ಜಾಡಿಸಿ , ಮತಿ ಕೂಡಿಸಿ
ಹಾಡೇಳಿ ತಿದ್ದಿದ್ದೀರಿ..
ಬ೦ದಾಗಿನಿ೦ದ ನಿಮ್ಮ ಬಳಿಗೆ ಬರುತ್ತೇನೆ
ಸಮಾಧಿಯಲ್ಲಿ ತಾವು ಮಲಗಿದ್ದೀರಿ
ಎಬ್ಬಿಸಲು ಕಳವಳಿಸುತ್ತೇನೆ.
ಹೇಳಿ, ಬರಲಿ ಯಾವಾಗ ?
ನಿಮ್ಮೊ೦ದಿಗೆ ಮತಾಡುವುದಿದೆ..
ಸ್ವಲ್ಪ ದಿನ ಬಿಟ್ಟು ಬರುತ್ತೇನೆ
ರೆಡಿಯಾಗಿರಿ, ಹೋಗಿಬರುವ
ಹುಟ್ಟುಹಾಕಲು ಪ್ರೀತಿ
ಬರಡಾದ ಬಿರುಕು ಬೆಲೆಯ ಬದುಕಿಗೆ.





0 Comments