‘ಸಾಂಬಾರ ಬಟ್ಟಲ ಕೊಡಿಸು’ಗೆ ವಿಭಾ ಸಾಹಿತ್ಯ ಪ್ರಶಸ್ತಿ…

೨೦೨೧ ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಯು ರೇಣುಕಾ ರಮಾನಂದ ಅವರ ‘ಸಾಂಬಾರ ಬಟ್ಟಲ ಕೊಡಿಸು’ ಎಂಬ ಕವನ ಸಂಕಲನದ ಹಸ್ತಪ್ರತಿಗೆ ದೊರೆತಿದೆ. ಕವಿ, ವಿಮರ್ಶಕರಾದ ಬಾನು ಮುಷ್ತಾಕ್ ಮತ್ತು ಕೆ. ಫಣಿರಾಜ ಅವರು ಅಂತಿಮ ಸುತ್ತಿನ ಆಯ್ಕೆತೀರ್ಪುಗಾರರಾಗಿದ್ದರು. ‘ಬದುಕಿನ ಅಸ್ತತ್ವದ ಸ್ಥಿತಿ, ಅದರಿಂದ ಉಂಟಾಗುವ ಆತಂಕಗಳು ಹಾಗೂ ಅವುಗಳನ್ನು ಎದುರಿಸುವ ಭಂಡ ಸಂಕಲ್ಪ ಭಾವವನ್ನು ಭಾಷೆಯನ್ನು ಮಾತ್ರವೇ ಪ್ರಮಾಣವಾಗಿಟ್ಟುಕೊಂಡು ಚಿತ್ರವತ್ತಾಗಿ ಕಟ್ಟುವ ಬಗೆಗಾಗಿ ‘ಸಾಂಬಾರ ಬಟ್ಟಲ ಕೊಡಿಸು’ ನಮ್ಮ ಆಯ್ಕೆ’ ಎಂದು ತೀರ್ಪುಗಾರರು ಅಭಿಪ್ರಾಯಪಟ್ಟಿದ್ದಾರೆ. ಈ ಪುರಸ್ಕಾರವು ಹತ್ತು ಸಾವಿರ ನಗದು ಹಾಗೂ ಪ್ರಶಸ್ತಿ ಪಲಕವನ್ನು ಒಳಗೊಂಡಿದೆ.

ರೇಣುಕಾ ರಮಾನಂದ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶೆಟಗೇರಿಯವರು. ವೃತ್ತಿಯಲ್ಲಿ ಶಿಕ್ಷಕಿ. ೨೦೧೭ ರಲ್ಲಿ ಪ್ರಕಟವಾದ ಇವರ ಮೊದಲ ಕವಿತಾ ಸಂಕಲನ ‘ಮೀನು ಪೇಟೆಯ ತಿರುವು’ಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ, ಮುಂಬೈ ಸುಶೀಲಾ ಶೆಟ್ಟಿ ಕಾವ್ಯ ಪ್ರಶಸ್ತಿ, ಅಮ್ಮ ಪ್ರಶಸ್ತಿ, ಕಾವ್ಯ ಮಾಣಿಕ್ಯ ಪುರಸ್ಕಾರ, ಹರಿಹರ ಶ್ರೀ ಪ್ರಶಸ್ತಿ, ಕೆ.ವಿ ರತ್ನಮ್ಮ ದತ್ತಿ ಇನ್ನಿತರ ಪ್ರಶಸ್ತಿಗಳು ದೊರೆತಿವೆ.

ಇವರ ಬಿಡಿ ಕಥೆ, ಕವಿತೆಗಳಿಗೆ ಮುಂಬೈ ನೇಸರು ಜಾಗತಿಕ ಬಹುಮಾನ, ಜೀವನ ಪ್ರಕಾಶನ ಯುಗಾದಿ ಕಾವ್ಯ ಬಹುಮಾನ, ಕರಾವಳಿ ಮುಂಜಾವು ದೀಪಾವಳಿ ಕಥಾ ಬಹುಮಾನ, ತುಷಾರದ ಸಾಹಿತ್ಯಾಂಜಲಿ ಕ್ಯಾಲಿಫೋರ್ನಿಯಾ ಕಥಾ ಬಹುಮಾನ, ಮುಂಬೈ ಗೋಕುಲವಾಣಿ ಕಥಾ ಬಹುಮಾನ, ಗುಲ್ಬರ್ಗಾ ವಿ.ವಿಜಯತೀರ್ಥ ರಾಜಪುರೋಹಿತ ಕಥಾ ಬಹುಮಾನಗಳು ದೊರಕಿವೆ. ಇಟಲಿಯ ಪಿಯಾಸೆಂಜಾ ಮ್ಯೂಸಿಯಂನಲ್ಲಿ ಇವರ ಕವಿತೆ ದಾಖಲಾಗಿದೆ. ಕಥೆ, ಕವಿತೆ, ಅಂಕಣಗಳಲ್ಲಿ ಉತ್ತರ ಕನ್ನಡದ ದಟ್ಟ ಪ್ರಾದೇಶಿಕತೆಯ ಸೊಗಡಿದೆ.

‍ಲೇಖಕರು Admin

October 21, 2021

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

3 ಪ್ರತಿಕ್ರಿಯೆಗಳು

  1. ಕಲಾ ಭಾಗ್ವತ್

    ಅಭಿನಂದನೆಗಳು ರೇಣುಕಾ. ಖುಷಿ

    ಪ್ರತಿಕ್ರಿಯೆ
  2. ಲಲಿತಾ ಸಿದ್ಧಬಸವಯ್ಯ

    ಹೃತ್ಪೂರ್ವಕ ಅಭಿನಂದನೆಗಳು ರೇಣುಕಾ

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: