ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‘ಸಿಂಪ್ಲಿ ಕೈಲಾಸಂ’…

– ರೇವನ್ ಪಿ.ಜೇವೂರ್

kannada bloggers

ಟಿ .ಪಿ.ಕೈಲಾಸಂ..ನಿಜಕ್ಕೂ ಆಸಮ್ಮೇ ಬಿಡಿ. ನಮ್ಮ ನಡುವಿನ ಜೀವಂತ ಕ್ಯಾರೆಕ್ಟರ್ ಗಳನ್ನ ರಂಗಕ್ಕೆ ತಂದಖ್ಯಾತಿ ಇವರದ್ದು. ಈಗ ಇದೇ ವ್ಯಕ್ತಿ ಜೀವಂತವಾದ್ರೆ, ಹೇಗೆ. ಹೌದು…! ರೇಡಿಯೋ ಜಾಕಿ ಶ್ರೀನಿ ಇಂತಹವೊಂದುಪ್ರಯೋಗ ಮಾಡಿದ್ದಾರೆ. ಪತ್ರಕರ್ತ ಮತ್ತು ರಂಗಕರ್ಮಿ ಎ.ಎಸ್.ಮೂರ್ತಿಯವರು ಬರೆದ “ಟಿಪಿಕಲ್ ಆರಥಿ” ನಾಟಕಆಧಾರಿಸಿ ಎಸ್.ವಿ. ಬಾಬು ನಿರ್ಮಾಣದಲ್ಲಿ ಸ್ವತ: ಶ್ರೀನಿನೇ ಒಂದು ಕಿರು ಚಿತ್ರ ಮಾಡಿದ್ದಾರೆ. ಹಾಗೆ ಸಿದ್ಧವಾದ ಆ ಚಿತ್ರವೇ”ಸಿಂಪ್ಲಿ ಕೈಲಾಸಂ”…

ಈ ಕಿರು ಚಿತ್ರದ ಪ್ರತಿ ಪ್ರೇಮ್ ಅದ್ಭುತವಾಗಿದೆ. ಶ್ರೀಷ್ ಕುಂದರವಲ್ಲಿ ಕ್ಯಾಮೆರಾ ಕೈಚಳಕದಲ್ಲಿ ಚಿತ್ರ ನಿಜಕ್ಕೂ ಒಂದುಕಲಾಕೃತಿಯೇ ಆಗಿದೆ. ಅಷ್ಟು ಚೆಂದಗೆ ಇಡೀ ಚಿತ್ರವನ್ನ ತೆಗೆಯಲಾಗಿದೆ. ದೃಶ್ಯ ಸಂಯೋಜನೆಗೆ ಪ್ಲಾನ್ ಮಾಡಿದಲೈಟಿಂಗ್ ಆಗಿರಲಿ. ಕ್ಯಾಮೆರಾ ಯ್ಯಾಂಗಲೇ ಆಗಿರಬಹುದು. ಎಲ್ಲವೂ ಮನಮೋಹಕ.

ಕಾರಣ, ಅಷ್ಟು ಶೃದ್ಧೆಯಿಂದಲೇಲೋಕಲ್ ಮೋಷನ್ ಫಿಕ್ಚ್ ಟೀಮ್ ಈ ಚಿತ್ರಕ್ಕಾಗಿ ಕೆಲಸ ಮಾಡಿದೆ.ಚಿತ್ರದ ಆರಂಭ ಶ್ರೀನಗರ ಕಿಟ್ಟಿ ನಿರೂಪಣೆಯಲ್ಲಿಯೇ ಸಾಗುತ್ತದೆ. ಟಿ.ಪಿ.ಕೈಲಾಸಂ ಅವರ ೧೭ ನಾಟಕಗಳ ಸಂಕ್ಷಿಪ್ತವಿವರಣೆನೂ ಇಲ್ಲಿ ದೊರೆಯುತ್ತದೆ. ಟಿ.ಪಿ.ಕೈಲಾಸಂ ಅವರ ವಿಶಿಷ್ಟ ಕನ್ನಡದ ಬಗ್ಗೆನೂ ಇಲ್ಲಿ ಪುಟ್ಟದೊಂದು ಪರಿಚಯವೂಸಿಗುತ್ತದೆ…ಇದಾದ ಮೇಲೆ ಇಲ್ಲಿ ಟಿ.ಪಿ.ಕೈಲಾಸಂ ಖುದ್ ಮಾತನಾಡಲು ಶುರು ಮಾಡುತ್ತಾರೆ…ಟಿ.ಪಿ.ಕೈಲಾಸಂ ಇಲ್ಲ ಅನ್ನೋದು ಗೊತ್ತೆಯಿದೆ.

ಆದ್ರೆ, ಇಲ್ಲಿ ಆ ಪಾತ್ರಕ್ಕೆ ರೇಡಿಯೋ ಜಾಕಿ ಮತ್ತು ಅಭಿನಯ ತಂರಂಗದವಿದ್ಯಾರ್ಥಿ ಶ್ರೀನಿ ಜೀವ ತುಂಬಿದ್ದಾರೆ. ಟಿ.ಪಿ.ಕೈಲಾಸಂ ಥರದ ಗೆಟಪ್. ಸಿಗರೇಟ್ ಸೇದುವ ಅವರ ಸ್ಟೈಲ್. ಸರಾಬು ಕುಡಿಯೋ ಖದರ್. ಹಂಗಂಗೆ ಇಲ್ಲಿ ಕಣ್ಣುಮುಂದೆಕಟ್ಟುತ್ತವೆ…ಆ ಕ್ಷಣವೇ ಕೈ ಇಲ್ಲಿ ಇನ್ನು ಜೀವಂತ ಅನ್ನೋಥರವೇ ಭಾಸವಾಗುತ್ತದೆ…ಕೈಲಾಸಂ ಅನೇಕ ಪಾತ್ರಗಳನ್ನ ರಂಗಕ್ಕೆ ತಂದಿದ್ದಾರೆ. ಅದೇ ಪಾತ್ರಗಳೇ ಈ ಚಿತ್ರದಲ್ಲಿ ಮಾತನಾಡುತ್ತವೆ. ಕೈಲಾಸಂಗೇನೆ ಹತ್ತು ಹಲವು ಪ್ರಶ್ನೆಗಳನ್ನ ಕೇಳುತ್ತವೆ. ಆದ್ರೆ,ಎಲ್ಲ ಪ್ರಶ್ನೆಗಳಿಗೂ ಉತ್ತರಿಸದೇನೆ ಕೈಲಾಸಂ ಮುಗುಳು ನಗೆಯಲ್ಲಿಯೇ ಅವುಗಳನ್ನೆಲ್ಲ ತೇಲಿಸಿ ಮುಂದಿನ ಕ್ಯಾರೆಕ್ಟರ್ ಗಳ ಬಗ್ಗೆ ತಮ್ಮಲಿಯೇ ಪ್ರಶ್ನಿಸಿಕೊಂಡುಮುನ್ನಡೆಯುತ್ತಾರೆ…

ಈ ರೀತಿ ಚಿತ್ರದಲ್ಲಿ “ಸೂಳೆ” ನಾಟಕ ಪಾತ್ರ ಬರುತ್ತದೆ. ಟೊಳ್ಳು-ಗಟ್ಟಿ ರಚನೆಯ ಕ್ಯಾರೆಕ್ಟರ್ ಗಳು ಹಾದು ಹೋಗುತ್ತವೆ. ಈ ಎಲ್ಲ ಪ್ರಮುಖ ಪಾತ್ರಕ್ಕೆ ನಟಿ ಛಾಯಾ ಸಿಂಗ್ ಜೀವ ತುಂಬಿದ್ದಾರೆ. ಹಾಗಂತ ಛಾಯ ಇಲ್ಲಿ ಎಲ್ಲೂ ಒಂದೇ ಥರ ಕಾಣಿಸುವುದಿಲ್ಲ. ಒಂದೇ ಥರದ ಅಭಿನಯವೂ ಇಲ್ಲ ಬಿಡಿ. ಅಂತಹ ಕಲಾತ್ಮಕ ನಟನೆಯನ್ನ ಛಾಯಾ ಸಿಂಗ್”ಸಿಂಪ್ಲಿ ಕೈಲಾಸಂ” ನಲ್ಲಿ ತೋರಿದ್ದಾರೆ. ಸದ್ಯಕ್ಕೆ ಈ ಚಿತ್ರ ಬೆಂಗಳೂರಲ್ಲಿ ಇತ್ತೀಚಿಗೆ ಪೂರ್ವ ಪ್ರದರ್ಶನ ಕಂಡಿದೆ. ಮೆಚ್ಚುಗೆನೂ ಪಡೆದಿದೆ…


‍ಲೇಖಕರು avadhi

26 October, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

1 Comment

  1. Ravi

    ಮೊದಲ ಷೋ ಆಯೋಜಕರು, ಪಾತ್ರಧಾರಿಗಳು, ಆಹ್ವಾನಿತರೂ ಸೇರಿ ಇಪ್ಪತ್ತೈದು ಮಂದಿ. ಎರಡನೇ ಷೋಗೆ ೪, ಮೂರನೇ ಷೋ ೫ ಮಂದಿ. ಚಿತ್ರದ ನಿರ್ದೇಶಕರು ಪ್ರಚಾರದ ಕೊರತೆ ಎಂದರು. ಅದು ಸುಳ್ಳು. ಏಕೆಂದರೆ ಚಿತ್ರ ಬೋರು ಹೊಡೆಸುತ್ತದೆ ಎಂದು ಚೆನ್ನಾಗೇ ಪ್ರಚಾರವಾಗಿದೆ – ಮೊದಲ ಷೋ ನೋಡಿ ಹೋದ ಆಹ್ವಾನಿತರಿಂದ!

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading