‘ಇಲ್ಲ ಆ ನ್ಯೂಸ್ ಬ್ರೆಕ್ ಮಾಡ್ಬಾರ್ದಿತ್ತು’ ಅಂತ ಗೆಳೆಯರೊಬ್ಬರು ಫೋನ್ ಮಾಡಿದಾಗ ರಾತ್ರಿ 8 ಗಂಟೆ ಕಳೆದು ಹೋಗಿತ್ತು. ದಟ್ಟ ನಕ್ಸಲೈಟ್ ಕೇಂದ್ರ ಎನಿಸಿಕೊಂಡಿದ್ದ ನಲ್ಲಮಲ್ಲ ಕಾಡಿನಲ್ಲಿ ಏನಾಗಿದೆ ಅನ್ನೋದೇ ಯಾರ ಊಹೆಗೂ ನಿಲುಕದಂತಾಗಿ ಹೋಗಿತ್ತು. ಫೋನ್ ಮಾಡಿದ್ದ ಗಳೆಯರಿಗಿದ್ದ ಆತಂಕ ನಕ್ಸಲೈಟುಗಳು ಹೆಲಿಕಾಪ್ಟರ್ ಹೊಡೆದುರುಳಿಸದೇ ಇದ್ರೂ ದಿಕ್ಕು ತಪ್ಪಿರುವ ‘ಬ್ರೆಕಿಂಗ್’ ಸುದ್ದಿ ಅವರನ್ನು ಅಲರ್ಟ್ ಮಾಡುತ್ತೆ. ‘ಸುಮ್ನೆ ಹಗ್ಗ ಕೊಟ್ಟು ಕೈಕಟ್ಟಿಸಿಕೊಳ್ಳೋ ಸಮಾಚಾರ ಇದು. ಈ ಬ್ರೆಕಿಂಗ್ ನ್ಯೂಸ್ ಗಳು ಇಲ್ಲದೇ ಇರೋ ಪ್ರಾಬ್ಲಂನ ಸೃಷ್ಟಿ ಮಾಡುತ್ತೆ’ ಅಂತ ಕಿಡಿ ಕಾರಿದ್ರು.
ತಕ್ಷಣ ನನಗೆ ನೆನಪಾಗಿದ್ದು ಮುಂಬೈನಲ್ಲಿ ನಡೆದ ಟೆರರಿಸ್ಟ್ ಅಟ್ಯಾಕ್ . ಬಹುಷಃ ಮಾಧ್ಯಮದ ರೋಲ್ ಇಂತ ಸಂದರ್ಭದಲ್ಲಿ ಹೇಗಿರ್ಬೇಕು ಅಂತ ದೊಡ್ಡ ಚರ್ಚೆ ಆಗಿದ್ದು ಆಗ್ಲೇ. ‘ಕ್ಯಾಮರಾ ಆ ಕಡೆ ಪ್ಯಾನ್ ಮಾಡಿ, ಈ ಕಡೆ ತೋರಿಸಿ’ ಅಂತ ಹೇಳ್ತಾ ವರದಿಗಾರರು ಪಟ ಪಟ ವಿವರ ಕೊಡ್ತಾ ಇದ್ರೆ ಇತ್ತ ಟಿವಿ ಮಂದೆ ಕೂತಿರೋರಿಗೆ ಅಯ್ಯೋ ಟೆರರಿಸ್ಟಿಗೆ ಬೇಕಾದ ಮಾಹಿತಿ ಎಲ್ಲಾ ಟೀವೀನೋರೆ ಕೊಟ್ಬಿಡ್ತಾರಲ್ಲಪ್ಪ ಅಂತ ಅವಡುಗಚ್ಚಿಕೊಳ್ತಾ ಇದ್ರು. ಒಬೆರಾಯ್ ಟ್ರಿಡೆಂಟ್ ಹೋಟೆಲ್ ನಲ್ಲಿ ಯಾರೂ ಸಿಕ್ಕಿಹಾಕಿಕೊಂಡಿಲ್ಲ ಅಂತ ಆರ್ಮಿ ಹೇಳಿಕೆ ಕೊಟ್ಟ ಮೇಲೂ ಟಿ ವಿ ಯವರು ಹೋಟಲ್ ನ ರಿಸಪ್ಷನ್ನಿಗೇ ಫೋನ್ ಮಾಡಿ ಅಲ್ಲಿ ಇಂತಿಷ್ಟು ಜನ ಇದ್ದಾರೆ ಅನ್ನೋ ವಿವರ ಕೊಟ್ರು. ಅಲ್ಲಾ ಇದೆಲ್ಲಾ ಟೆರರಿಸ್ಟ್ ಗಳಿಗೆ ಮಾಡೋ ಹೆಲ್ಪ್ ಅಲ್ಲವಾ ಅಂತ ನೂರೆಂಟು ಚರ್ಚೆ ಎದ್ದೇಳ್ತು. ಟಿ ವಿ ಕ್ಯಾಮರಾ ಆಚೀಚೆ ತಿರುಗಿದಾಗ ಒಂದು ಕ್ಷಣ ಬೆರಗಾಗಿಬಿಡೋ ಅಷ್ಟು ವರದಿಗಾರರು, ಕ್ಯಾಮರಾಮನ್ ಗಳು ಸುದ್ದಿ ತಯಾರಿಸುವುದರಲ್ಲಿ ಬ್ಯುಸಿಯಾಗಿದ್ರು. ಒಂದು ಕಡೆ ಬರ್ಖಾ ದತ್ ಇನ್ನೊಂದ್ಕಡೆ ನೂರಾರು ‘ಬರ್ಖಾದತ್ಸ್ ಇನ್ ಮೇಕಿಂಗ್’
ಪೂರ್ಣ ಓದಿಗೆ ಭೇಟಿ ಕೊಡಿ- ಮೀಡಿಯಾ ಮೈಂಡ್
0 ಪ್ರತಿಕ್ರಿಯೆಗಳು