-ಎಂ ಬಿ ಶ್ರೀನಿವಾಸ ಗೌಡ
ನೀನು ಹಚ್ಚಿದ ಕಿಚ್ಚು
ಎದೆಯ ಒಡಲೊಳಗೆ ಸುಡುತಿರುವ
ನೋವು.
–
ನೀನು ಹುಟ್ಟಿಸಿದ ಮೋಹಕ್ಕೆ ಸಿಕ್ಕ
ಒಡಲಿಗೆ ನಿಟ್ಟುಸಿರ
ಭಾಗ್ಯ.
ನೀನು ಕೊಟ್ಟ ಮುತ್ತು
–
ಎದೆಯ ಕಾವಲಿ ಒಳಗೆ
ಹೂತಿಟ್ಟ ರಕ್ತದ
ಬೀಜ.
–
ನಿನ್ನ ನೆನಪುಗಳೆಲ್ಲ
ಬರದ ಭಾಗ್ಯವ ನೆನೆದು
ಮರುಗುವ
ಮುಳ್ಳು.
ನಿನ್ನ ಮಾಯದ ಮೋಡಿಗೆ
ಸಿಕ್ಕ ಜೀವಕ್ಕೆ, ನದಿಯ ಸುಳಿಗೆ
ಸಿಕ್ಕು ನಾಶವಾದ
ಭಾವ.
–
ನಿನ್ನ ನೆನಪುಗಳೆಲ್ಲ
ಎದೆಯೊಳಗೆ
ಕೆಂಪು ಕೆಂಪಾಗಿ
ರಕ್ತ ಸ್ತ್ರಾವ.
–
ನೀನೆ ಕಳಿಸಿದ್ದ ಪ್ರೀತಿಯ ಹಾಡಿಗೆ
ಯಾಕೆ ಬರಲಿಲ್ಲ
ಹೂ ಬಿಡುವ
ಕಾಲ.
–
ನಾವು ನಿಲ್ಲುತ್ತಿದ್ದ
ಕಾನನದ ಮರ ಕೂಡ
ಸತ್ತು ಹೋದ ಸುದ್ದಿ
ನಿನ್ನವರೆಗೂ
ಬಂತಾ.
–
ಇರಲಿ ಇರಲಿ ಬಿಡು
ಸುಡಲಿ ಸುಡಲಿ ಬಿಡು
ನನ್ನ ಬದುಕ ದಾರಿಯ ಗುಂಟಾ
ಕೆಂಡ.





0 Comments