ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಸುಡುವ ಬಿಸಿಲಿಗೆ ನಾಲ್ಕು ಒಲವ ಮಾತು

ಹೊಳೆಯ ಹಾದಿ ಹಿಡಿದು

ಸೂರ್ಯಕಿರಣ್ ಜೋಯಿಸ್

ಅ೦ತರಾಳದ ಮಾತು

ಏನು ಎತ್ತ ಎಂದು ಕೇಳದೆ ಸುಮ್ಮನೆ ಹೊರಟು ಬಿಡೋಣ ಹುಣ್ಣಿಮೆಯ ಬೆಳದಿಂಗಳಿಗೋ, ಕಂಪು ಹೊತ್ತ ತಂಗಾಳಿಗೋ ಕಾಯುವುದು ಬೇಡ ಇನ್ನು – ಹಿಡಿಯುವ ಆ ಹೊಳೆಯ ಕಾಲು ದಾರಿಯ ಜಾಡು ಬಿಟ್ಟು ಚಂದಿರನಿಗೆ ಅವನ ಪಾಡು  ಹನಿವ ಮಳೆಗೆರಡು ಬೊಗಸೆ ಸುಡುವ ಬಿಸಿಲಿಗೆ ನಾಲ್ಕು ಒಲವ ಮಾತು ಕೊರೆವ ಚಳಿಗೆ ತೋಳ ಬಳಸು ತುಸು ದೂರದ ನಡಿಗೆಯಷ್ಟೇ – ಬೆಸೆದಿರಲಿ ಕೈಯೊಳು ಕೈ ನಿಂತಿರಲಿ ಬಾಯ ತುದಿಯಲಿ ಹೇಳಬೇಕೆಂದ ಸವಿ ನುಡಿ – ಕಣ್ಣಂಚಿನ ಮಿನುಗು ಮರೆಮಾಚುವುದು ನೋಡು ಆ ತುಂಟ ನಗೆಯನು – ಹೊಳೆಯ ದಂಡೆಯಲಿ ಎದೆಗಾತು ಕೂತಿರೆ ನೀನು ತೆರೆಗಳ ಗುಂಜನದೊಳು ರೆಪ್ಪೆ ಮುಚ್ಚಲು ನಾನು ನೆನಪಾಗಿ ಥಟ್ಟನೆ ನೀನಂದು ಮೈಮರೆಸಿದ ಹಾಡು – ಕೈಯ ಹಣೆಮುಟ್ಟಿಸಿ ನೋಟದಲ್ಲೇ ಅಹವಾಲು ಇಡುವೆನು ಅದೇ ಹಾಡನು ಆ ಮೋಹಕ ನಾದವನು ಒಲವ ಸುಧೆಯೊಳದ್ದಿ ಹರಿಯಬಿಡೆಂದು ಅವೇ ಪದಗಳಿಗೊಮ್ಮೆ ನಿನ್ನ ದನಿಯ ಜೇನು ಪೂಸಿಬಿಡೆಂದು – ಗೊತ್ತಿಲ್ಲದೇನಿಲ್ಲ ನಿನಗೆ ನಿನ್ನಾ ಹಾಡಿಗೆ ಎದೆ ಹನಿವುದು ಇನ್ನಿಲ್ಲದಂತೆ ಕಂಠ ಬಿಗಿವುದು ಮಾತು ಹೊರಡದಂತೆ – ಬೇಕಿಲ್ಲ ಅಲ್ಲವೆ ಇನ್ಯಾವ ರಸಘಳಿಗೆಯ ನಿರೀಕ್ಷೆ? ನಿನ್ನ ಹಾಡು ನನ್ನ ಮೈಮರೆವು ಕೊರಳ ಇಂಪು ಕವಿತೆಯ ಕಂಪು ಅರಳಿ ನಗುವ ಮಲ್ಲಿಗೆ ಮುಗಿಲು ಬಯಲ ತುಂಬಾ ಪ್ರೀತಿ ಹೊನಲು ಸಾಕಲ್ಲವೆ ಇಷ್ಟು ಕನಸಿನ ಜೋಳಿಗೆ ತುಂಬಿಸಲು? – ಹೊರಡೋಣ ನಡಿ ಇನ್ನು ಬಿಟ್ಟರಾಯಿತು ಕರಗುವ ಸಮಯವ ಋತುಗಳ ಪಾಲಿಗೆ ಹಂಚಿದರಾಯಿತು ಕಿರುನಗೆಯ ಹೂಗಳ ಸಾಲಿಗೆ]]>

‍ಲೇಖಕರು G

28 April, 2012

1 Comment

  1. sunil

    amoghavaagide….its very beautifulll lines

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading