’ಸುತ್ತ ಮುತ್ತ ಕಳ್ಳ ಚಿತ್ತ ಇತ್ತ ಬಂದರಾರು?’ – ಜ್ಯೋತಿ ಮಹಾದೇವ್ ಕವಿತೆ

ಬೆಣ್ಣೆ ಕಳ್ಳ

ಜ್ಯೋತಿ ಮಹಾದೇವ್

ನೆಲುವಿನಲ್ಲಿ ಹಾಲು ಮೊಸರು
ನೆಲದ ಮೇಲೆ ಗೊಲ್ಲ
ಮೆಲ್ಲಬೇಕು ಅಚ್ಚ ಬೆಣ್ಣೆ
ಕೈಗೆ ನಿಲುಕದಲ್ಲ
 
ಹಾರಿ ಕುಣಿದು ಕಪ್ಪೆ ಜಿಗಿದು
ತೂರಿ ನೋಟದೇಣಿ
ಭಾರಿ ಕಷ್ಟ ಪಟ್ಟರೇನು
ಕೈಗೆ ಸಿಗದು ಭರಣಿ
 
ಸುತ್ತ ಮುತ್ತ ಕಳ್ಳ ಚಿತ್ತ
ಇತ್ತ ಬಂದರಾರು?
ಮೆತ್ತಗೊಮ್ಮೆ ಇಣುಕಿ ನೋಡೆ
ಕೈಗೆ ಹೆಗಲ ಊರು
 
ಅಣ್ಣ ಬಂದ ಜೊತೆಗೆ ತಂದ
ತನ್ನ ಭಂಡ ಜೋಡಿ
ಬಣ್ಣವೇರಿ ಬಾನಿನತ್ತ
ಕೈಗೆ ಬಂತು ಜಾಡಿ
 
ಕಿಲಕಿಲಕಿಲ ಬಳೆಯ ಸದ್ದು
ಚಲನೆ ಪಡೆದ ಕೂಟ
ನೆಲದ ಮೇಲೆ ಹಾಲು ಮೊಸರು
ಕೈಗೆ ಬೆಣ್ಣೆಯೂಟ
 

‍ಲೇಖಕರು avadhi

August 28, 2013

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

3 ಪ್ರತಿಕ್ರಿಯೆಗಳು

  1. Ishwara Bhat K

    ಆಹಾ .. ಚೆನ್ನಾಗಿದೆ ಜ್ಯೋತಿ ಅಕ್ಕ.. ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು 🙂 🙂

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: