ಸುಶ್ರುತನ ಹಾಡು: ಗೋಕುಲ ವಿರಹ

-ಸುಶ್ರುತ ದೊಡ್ಡೇರಿ

ಮೌನಗಾಳ

ರಾತ್ರಿ ಅಂಥಾ ಮಳೆ ಬಂದಿತ್ತು ಅಂತ
ಗೊತ್ತಾಗಿದ್ದು ಬೆಳಗ್ಗೆ ಎದ್ದಮೇಲೇ.

ನಂಬಲಿಲ್ಲ ನಾನು,
ಚೂರೂ
ಒದ್ದೆಯಾಗಿರಲಿಲ್ಲವಲ್ಲ ನೀನು
ನಡೆದು ಬರುವಾಗ ತಡರಾತ್ರಿ
ಕನಸಿನಲ್ಲಿ?

ನೆಂದಿದ್ದರೆ, ಮೆತ್ತನೆ ವಸ್ತ್ರದಲ್ಲಿ
ನಿನ್ನ ತಲೆ ಒರೆಸಿ
ಗರಿಗರಿ ಷರಾಯಿ ತೊಡಿಸಿ
ಬೆಚ್ಚನೆ ಹಾಲು ಕುಡಿಸಿ
ಅಂತಃಪುರದ ಸೋಪಾನದಲ್ಲಿ
ರಜಾಯಿ ಸಮೇತ ಬಳಸಿ
ತಟ್ಟುತ್ತಿದ್ದೆ ಚುಕ್ಕು.

ಆದರೆ, ಬಂದ ನೀನು
ಒದ್ದೆಯಾಗಿರಲೇ ಇಲ್ಲವಲ್ಲ..?
ಹಾಗಾದರೆ ಗಂಧವತೀ ಭೂಮಿ
ಸುಳ್ಳು ಹೇಳುತಿದೆಯೇ?
ಬಿದ್ದಿರುವ ತರಗೆಲೆಗಳು ಒದ್ದೆಯಾಗಿವೆ ಏಕೆ?
ಭವಂತಿ ಅಂಗಳದಲ್ಲಿ ನೀರು ಹೇಗೆ?

ಎಚ್ಚರಾದಾಕ್ಷಣ ಪಕ್ಕದಲ್ಲಿ ತಡವಿ
ನೀನಿಲ್ಲದ್ದು ತಿಳಿದು ಬಾಗಿಲಿಗೆ ಓಡೋಡಿ ಬಂದು
ಎಲ್ಲಿ ಹೋದ ನನ್ನಿನಿಯ ಎಲ್ಲಿ ಹೋದ ಕಾಂತ
ಅಂತ ಅರಮನೆಯನ್ನೆಲ್ಲ ಹುಚ್ಚಿಯಂತೆ ಹುಡುಕುವಾಗ
ಸಖಿಯರು ಬಂದು ಸಮಾಧಾನ ಮಾಡುತ್ತಾರೆ:
ಬಿಡು, ಬಿದ್ದದ್ದು ಎಂದಿನಂತೆ ಒಣ ಕನಸು ಅಂತ.

ಹೌದು, ಬಿಡದ ಭ್ರಮೆ ನನಗೆ..
ಕೃಷ್ಣ ಬಿಟ್ಟುಹೋದಮೇಲೆ
ಗೋಕುಲದಲ್ಲಿ ಮಳೆಯೆಲ್ಲಿ ಆಗಿದೆ?
ಈ ಒದ್ದೆ, ಈ ಒಸರು ಎಲ್ಲ
ರಾಧೆ ಮತ್ತವಳ ಸಖಿಯರ
ಕಣ್ಣೀರ ಹರಿವಿನ ಕುರುಹು
ಎಂಬುದು ಹೊಳೆಯದೆ ಹೋಯಿತಲ್ಲ.

‍ಲೇಖಕರು avadhi

April 20, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: