ಬೆಂಗಳೂರಿನಿಂದ ಕರೆ ಮಾಡಿದ ಎಚ್ ಎನ್ ಆನಂದ ನನಗೆ ಈ ಪ್ರಶ್ನೆ ಕೇಳಿದರು. ಗುಲ್ಬರ್ಗಾ ಬ್ಯೂರೋದಿಂದ ಆ ದಿನ ಒಂದು ಮಣ ನ್ಯೂಸ್ ಗಳನ್ನು ಹೊತ್ತುಹಾಕಿದ್ದೆ. ಹಾಗೆ ಕಳಿಸುವಾಗ ಇಂತಿಂಥ ಪೇಜ್ ಗೆ ಇಂತದು ಬಂದರೆ ಚೆನ್ನ ಎಂದು ಸಜೆಸ್ಟ್ ಮಾಡುವುದೂ ನನ್ನ ‘ತಲೆಹರಟೆ’ಯಾಗಿತ್ತು. ಹಾಗೆ ನಾನು ಒಳಪುಟಕ್ಕೆ ಬಳಸಿಕೊಳ್ಳಿ ಅಂತ ಸಜೆಸ್ಟ್ ಮಾಡಿದ್ದು ಅರೆಬೆತ್ತಲೆ ಸೇವೆಯ ಫೋಟೋವನ್ನ. ಆಗಲೇ ಆನಂದ ಅವರು ನನಗೆ ಫೋನಾಯಿಸಿದ್ದು. ‘ಸುಧಾ’ದಲ್ಲಿ ಸಾಕಷ್ಟು ಕಾಲ ಸೇವೆ ಸಲ್ಲಿಸಿದ್ದ ಆನಂದ ಆಗ ‘ಪ್ರಜಾವಾಣಿ’ ಎಡಿಟೋರಿಯಲ್ ಡೆಸ್ಕ್ ಹ್ಯಾಂಡಲ್ ಮಾಡುತ್ತಿದ್ದರು.
ಇದು ಖಂಡಿತವಾಗಿಯೂ ಪೇಜ್ ಒನ್ ಫೋಟೋ, ಯಾಕೆ ಒಳಪುಟಕ್ಕೆ ಬಳಸಿ ಎನ್ನುತ್ತೀರಿ ಎಂದರು. ನಾನು ಆ ದಿನದ ಇನ್ನಾವುದೋ ಸುದ್ದಿಯ ಬಾಲ ಹಿಡಿದು ಅದು ಪೇಜ್ ಒನ್ ನಲ್ಲಿ ಬರಬೇಕು ಎಂದು ವಕಾಲತ್ತು ಮಾಡುತ್ತಿದ್ದೆ. ಆನಂದರ ದನಿ ಹೆಚ್ಚು ದೃಢವಾದಾಗ ‘ಸುಧಾ’ದಲ್ಲಿದ್ದವರಿಗೆ ಏನು ಗೊತ್ತಾಗುತ್ತೆ ನ್ಯೂಸ್ ಇಂಪಾರ್ಟೆನ್ಸ್ ಅಂತ ಸುಮ್ಮನಾದೆ.
0 ಪ್ರತಿಕ್ರಿಯೆಗಳು