ಕಲಬುರಗಿ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ೨೦ ನೇ ವರ್ಷದ `ಅಮ್ಮ ಪ್ರಶಸ್ತಿ’ಗಾಗಿ ೨೦೧೯-೨೦ ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.
ಕಳೆದ ೧೯ ವರ್ಷಗಳಿಂದ ನಿರಂತರ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೀಡಲಾಗುತ್ತಿರುವ ಅಮ್ಮ ಪ್ರಶಸ್ತಿಗೆ ಈಗ ೨೦ ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದಾಗಿದೆ.
ಕೃತಿಗಳನ್ನು ಸ್ವೀಕರಿಸಲು ಅಕ್ಟೋಬರ್ ೩೦ ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃತಿಗಳನ್ನು ಕಳುಹಿಸಬೇಕಾದ ವಿಳಾಸ :
ಶ್ರೀಮತಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್,
ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರು ಪ್ರತಿಷ್ಠಾನ
“ಅಮ್ಮ ನಿಲಯ”, ರಾಮಚಂದ್ರ ಲೇಔಟ್, ಪಿಡಬ್ಲೂಎಂ ಯಡಿ ಕಚೇರಿ ಹತ್ತಿರ, ಸೇಡಂ-೫೮೫ ೨೨೨.
ಕಲಬುರಗಿ ಜಿಲ್ಲೆ.
ಹೆಚ್ಚಿನ ವಿವರಗಳಿಗಾಗಿ, ಮೊಬೈಲ್ ಸಂಖ್ಯೆ: ೯೭೩೧೬೬೬೦೫೨ ಸಂಪರ್ಕಿಸಬಹುದು.
0 ಪ್ರತಿಕ್ರಿಯೆಗಳು