ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‌ಬಿ ಎಂ ಬಷೀರ್ ಕವಿತೆ- ಕಳಚಿಟ್ಟು ಬಾ ಒಳಗೆ…

ಬಿ ಎಂ ಬಶೀರ್

ಒಳ ಬರುವ ಮೊದಲು ಗೆಳೆಯ ಕೇಳಿದ
ಚಪ್ಪಲಿಯನ್ನು ಕಳಚಿಟ್ಟು ಬರಲೆ?

ಹೇಳಿದೆ:
ಗೆಳೆಯ ಕಾಲಿನಲ್ಲಿರುವ ಚಪ್ಪಲಿ
ಹಾಗೇ ಇರಲಿ
ನೀನು ಬಳಸಿ ಸವೆದು ಹೋಗಿರುವ
ನಿನ್ನ ಹೆಸರನ್ನು ಕಳಚಿ ಒಳಗೆ ಬಾ…

ಗೆಳೆಯಾ,
ತಪ್ಪು, ಹೆಸರನ್ನು ಹೊಲಿದ
ಚಮ್ಮಾರನದ್ದಲ್ಲ
ಅದನ್ನು ಧರಿಸಿ ನೀನು
ತುಳಿದ ದಾರಿಯದ್ದು

ನೀನು ಧರಿಸಿಕೊಂಡ
ಚಪ್ಪಲಿಯಲ್ಲಿ
ಅಂಟಿಕೊಂಡ ಧರ್ಮ, ಜಾತಿ
ವರ್ಗ, ಕುಲ, ಗೋತ್ರ…
ಇತ್ಯಾದಿ ಹೊಲಸುಗಳ ನೋಡು
ಒಳಗೆ ಬರುವುದಾದರೆ
ಕಳಚಿಟ್ಟು ಬಾ…
ಆ ನಿನ್ನ ಹೆಸರನ್ನ!

ಗೆಳೆಯಾ…
ಹೊಂಡ ತೋಡಿ ಮುಚ್ಚುವಾಗ
ನೀನೊಂದು ಬರೇ ಹೆಣ!
ನೀನು ಧರಿಸಿಕೊಂಡ
ಹೆಸರೆಂಬ ಚಪ್ಪಲಿಯನ್ನು
ಹರಿದು ಎಸೆದಿದ್ದಾರೆ ನೋಡು,

ಗುಜರಿ ಅಂಗಡಿಯ ತಕ್ಕಡಿಯಲ್ಲಿ
ತೂಗುತ್ತಿರುವ ನಿನ್ನ ಹೆಸರು
ಹತ್ತು ರೂಪಾಯಿಯಷ್ಟೂ
ಬೆಲೆ ಬಾಳುತ್ತಿಲ್ಲ!!

‍ಲೇಖಕರು Admin

10 December, 2022

1 Comment

  1. Rashmi Hegde

    Chennaagi baredidderi ..
    Tumba
    Ishtavaaythu Kavithe

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading