ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‘ಋಷ್ಯಶೃಂಗ’ ಕಾರ್ನರ್

ಇನ್ನು ಮುಂದೆ ಆಗಾಗ ಋಷ್ಯಶೃಂಗ

ವ್ಯಸನ
tailo

ನಮ್ಮೂರಲ್ಲೊಬ್ಬ ಟೈಲರ್ ಇದ್ದ. ಬೀರಣ್ಣ, ಬೀರಪ್ಪ ಅಂತೆಲ್ಲ ಅವನಿಗೆ ಅನೇಕ ಹೆಸರು. ಬೀರ ಅಂತ ಅಪ್ಪ ಇಟ್ಟ ಹೆಸರಿರಬೇಕು. ಯಾರ ಜೊತೆಗೂ ಮಾತಾಡುತ್ತಿರಲಿಲ್ಲ. ತನ್ನ ಪಾಡಿಗೆ ಬಟ್ಟೆ ಹೊಲಿಯುತ್ತಿದ್ದ. ಅಳತೆ ತೆಗೆದು, ಒಂದಿಷ್ಟೂ ಅಳತೆ ವ್ಯತ್ಯಾಸವಾಗದೆ ಬಟ್ಟೆ ಹೊಲಿಯುವುದರಲ್ಲಿ ಅವನು ಹೆಸರುಗಾರ.
ಶರ್ಟು, ಪ್ಯಾಂಟು, ಚೂಡಿದಾರ, ರವಕೆ, ಲಂಗ- ಎಲ್ಲವನ್ನೂ ಹೊಲಿದು ಕೊಡುತ್ತಿದ್ದನಾದರೂ ಕ್ರಮೇಣ ಪ್ರಸಿದ್ಧವಾದದ್ದು ಅವನು ಹೊಲಿದುಕೊಡುತ್ತಿದ್ದ ಚಡ್ಡಿ. ಕೊನೆಕೊನೆಗೆ ಚಡ್ಡಿ ಹೊಲಿಸಿಕೊಂಡರೆ ಬೀರಪ್ಪನ ಹತ್ತಿರವೇ ಹೊಲಿಸಿಕೊಳ್ಳಬೇಕು ಅಂತ ಜನ ಮಾತಾಡಿಕೊಳ್ಳತೊಡಗಿದರು.
ಚಡ್ಡಿ ಹೊಲಿದೂ ಹೊಲಿದೂ ಅಭ್ಯಾಸವಾಯಿತೋ, ಮನಸ್ಸಿಗೆ ಬರೀ ಚಡ್ಡಿಯನ್ನಷ್ಟೇ ಹೊಲೀಬೇಕು ಅನ್ನಿಸಿತೋ ಅಥವಾ ಚಡ್ಡಿ ಹೊಲಿಯುವುದೇ ಒಂದು ವ್ಯಸನವಾಯಿತೋ ಏನೋ. ಆಮೇಲಾಮೇಲೆ ಶರ್ಟು ಬಟ್ಟೆ, ರವಕೆ ಬಟ್ಟೆ, ಪ್ಯಾಂಟು ಪೀಸು ಒಯ್ದು ಕೊಟ್ಟರೂ ಬೀರಪ್ಪ ಅದರಲ್ಲಿ ಚಡ್ಡಿ ಹೊಲಿದುಕೊಡುತ್ತಿದ್ದ. ಜನ ಬೈದರು, ಬುದ್ಧಿ ಹೇಳಿದರು, ತಿದ್ದಲು ನೋಡಿದರು. ರೇಗಿದರು.
ಬೀರಪ್ಪ ಬದಲಾಗಲಿಲ್ಲ.
ಇತ್ತೀಚೆಗೆ ಚಡ್ಡಿ ಹೊಲಿಸಬೇಕಾದವರು ಮಾತ್ರ ಬೀರಪ್ಪನ ಬಳಿಗೆ ಬರುತ್ತಾರಂತೆ.
ಏನೇ ಆದ್ರೂ ಚಡ್ಡಿ ಮಾತ್ರ ಸಕತ್ತಾಗೇ ಹೊಲೀತಾನೆ ಬಿಡ್ರೀ ಅಂತ ನಮ್ಮೂರ ಜನ ಗುಂಪು ಸೇರಿದಲ್ಲೆಲ್ಲ, ಚಡ್ಡಿ ಮಾತು ಬಂದಾಗಲೆಲ್ಲ ಬೀರಪ್ಪನನ್ನು ಕೊಂಡಾಡುವುದಿದೆ.ಬೀರಪ್ಪನೂ ಅದರಿಂದಲೇ ಸಂತೋಷ ಹೊಂದಿದನವಂತೆ ಕೇವಲ ಚಡ್ಡಿ ಹೊಲಿಯುವುದಕ್ಕೇ ತನ್ನ ಪ್ರತಿಭೆಯನ್ನು ಸೀಮಿತಗೊಳಿಸಿಕೊಂಡು ಬಿಟ್ಟಿದ್ದಾನೆ.

‍ಲೇಖಕರು avadhi

25 November, 2008

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

3 Comments

  1. ಸುಬ್ರಮಣಿ

    ಚಡ್ಡಿ ಕಥೆ ಚೆನ್ನಾಗಿದೆ

  2. ಗುರು ಬಾಳಿಗ

    >> “ಆಮೇಲಾಮೇಲೆ ಶರ್ಟು ಬಟ್ಟೆ, ರವಕೆ ಬಟ್ಟೆ, ಪ್ಯಾಂಟು ಪೀಸು ಒಯ್ದು ಕೊಟ್ಟರೂ ಬೀರಪ್ಪ ಅದರಲ್ಲಿ ಚಡ್ಡಿ ಹೊಲಿದುಕೊಡುತ್ತಿದ್ದ.”
    ಭಯಾನಕ! 🙂

  3. M G Harish

    ಯಾವುದರಲ್ಲಿ ಮನಸ್ಸು ಜಾಸ್ತಿ ತೊಡಗಿಕೊಂಡಿರುತ್ತೋ ಅದರಲ್ಲೇ ಮಗ್ನವಾಗಿಬಿಡುತ್ತೆ ಅನ್ನೋದನ್ನ ಸರಳ-ಸುಂದರವಾಗಿ ಕಥೆಯಲ್ಲಿ ಬರೆದಿದ್ದೀರಿ…

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading