ಶಿಷ್ಟಾಚಾರದ ರಾಜಕಾರಣವನ್ನು ಮೀರಿದ ಒಂದು ಅಪ್ಪುಗೆ!

ನಮ್ಮ ಅಂಕಣಕಾರ ಎನ್ ರವಿಕುಮಾರ್ ಅವರ ‘ರಾಹುಲ್ ಅವರ ಅಪ್ಪುಗೆಯನ್ನು ಅಪರಾಧದ ಕಟಕಟೆಗೆ ತಂದು ನಿಲ್ಲಿಸಲಾಗುತ್ತಿದೆ..’ ಬರಹಕ್ಕೆ ಕು ಸ ಮಧುಸೂಧನ ರಂಗೇನಹಳ್ಳಿ ಅವರು ಪ್ರತಿಕ್ರಿಯಿಸಿದ್ದಾರೆ.

ಕು.ಸ.ಮಧುಸೂದನ ರಂಗೇನಹಳ್ಳಿ

ಬಹುಶ: ಅದೊಂದು ಸಣ್ಣ ತಪ್ಪನ್ನು ರಾಹುಲರು ಮಾಡದೇ ಹೋಗಿದ್ದರೆ ಮೊನ್ನೆಯ ವಿಸ್ವಾಸ ಮತ ಯಾಚನೆಯ ದಿನದಂದು ರಾಹುಲ್ ಗಾಂದಿಯವರು ನಡೆದುಕೊಂಡ ರೀತಿ ಮತ್ತು ಮಾಡಿದ ಬಾಷಣ ಬಹುಕಾಲ ಇಂಡಿಯಾ ಜನಮಾನಸದಲ್ಲಿ ಅಚ್ಚಳಿಯದೆ ಉಳಿದು ಬಿಡುತ್ತಿತ್ತು.

ವಿಶ್ವಾಸಮತದ ಪರವಾಗಿ ಸುದೀರ್ಘವಾಗಿ ವಸ್ತುನಿಷ್ಠವಾಗಿ(ಬಹುಶ: ಪ್ರಾನ್ಸ್ ಸರಕಾರದ ಹೇಳಿಕೆಯ ಉಲ್ಲೆÃಖವೊಂದನ್ನು ಹೊರತು ಪಡಿಸಿ) ಯಾವ ಹಿಂಜರಿಕೆಯೂ ಇರದಂತೆಮಾತಾಡಿದ ರಾಹುಲರ ಸರಕಾರದ ವಿರುದ್ದದ ಟೀಕೆಗಳಿಗೆ ಅಷ್ಟೇ ವಸ್ತುನಿಷ್ಠವಾಗಿ ಉತ್ತರ ಕೊಡುವುದು ಕಷ್ಟವಾಗುತ್ತಿತ್ತು. ಅದರೆ ತಮ್ಮ ಮಾತು ಮುಗಿಸಿದಾಕ್ಷಣ ಅವರು ನೇರವಾಗಿ ಪ್ರದಾನಮಂತ್ರಿಗಳ ಆಸನದ ಬಳಿ ಹೋಗಿ ಪ್ರದಾನಿಯವರನ್ನು ಅಪ್ಪಿಕೊಂಡಿದ್ದು ಸದನವನ್ನಿರಲಿ ಸ್ವತ: ಪ್ರದಾನಿಯವರಿಗೆ ವಿಸ್ಮಯವನ್ನುಂಟು ಮಾಡಿದ್ದು ನಿಜ.

ಅಲ್ಲಿಯವರೆಗು ಎಲ್ಲವೂ ಚೆನ್ನಾಗಿಯೇ ಇತ್ತು. ಅದರೆ ಪ್ರದಾನಿಯವರ ಅಪ್ಪುಗೆಯ ನಂತರ ತಮ್ಮ ಸ್ಥಾನಕ್ಕೆ ಮರಳಿದ ರಾಹುಲ್ ಕ್ಯಾಮೆರಾಗಳಿವೆಯೆಂಬುದನ್ನುಮರೆತವರಂತೆ ತಮ್ಮ ಗೆಳೆಯ ಸಹ ಸಂಸದನತ್ತ ತಿರುಗಿ ಎಡಗಣ್ಣು ಮಿಟುಕಿಸಿದ್ದು ಅಲ್ಲಿಯವರೆಗಿನ ರಾಹುಲರ ವರ್ತನೆಯ ಗಾಂಭೀರ್ಯತೆಯನ್ನು ಮರೆಸಿಬಿಟ್ಟಿತು. ಅವರು ಸಹಜವಾಗಿಯೇ ಕಣ್ಣು ಮಿಟುಕಿಸಿದ್ದರೂ ನೇರ ಪ್ರಸಾರ ನೋಡುತ್ತಿದ್ದಜನರಿಗೆ ರಾಹುಲ್ ಪ್ರದಾನಿಯವರನ್ನು ತಬ್ಬಿಕೊಂಡಿದ್ದೇ ಒಂದು ನಾಟಕವೇನೊ ಎನ್ನುವಂತಹ ತಪ್ಪು ಸಂದೇಶ ನೀಡಿಬಿಟ್ಟಿತು.

ಮೊದಲೇ ರಾಹುಲರನ್ನು ಸಮಯಬಂದಾಗಲೆಲ್ಲ ನೆಗೆಟಿವ್ ಶೇಡ್ ನಲ್ಲಿಯೇ ತೋರಿಸುವ ಪಟ್ಟಭದ್ರ ವಿದ್ಯುನ್ಮಾನ ಮಾಧ್ಯಮಗಳು ಸಹ ಅದನ್ನೆ ಹೈಲೈಟ್ ಮಾಡುತ್ತ ರಾಹುಲರ ಗಂಬೀರವಾದ ಬಾಷಣ ಮತ್ತು ಅಪ್ಪುಗೆಯ ಹಿಂದಿದ್ದ ಮಹತ್ವವನ್ನು ಮತ್ತು ನೈಜತೆಯನ್ನು ಮರೆಮಾಚಿ ಬಿಟ್ಟವು.

ಮೊದಲಿಗೆ ರಾಹುಲರ ಬಾಷಣವನ್ನೊಮ್ಮೆ ನೋಡೋಣ. ರಾರ್ಫೆಲ್ ವಿಮಾನ ಖರೀಧಿಯಲ್ಲಿನ ಒಂದು ತಪ್ಪು ಮಾಹಿತಿಯ ಹೊರತಾಗಿ ಸರಕಾರಕ್ಕೆ ಅವರು ಕೇಳಿದ ಬಹುತೇಕ ಪ್ರಶ್ನೆಗಳು ಅತ್ಯಂತ ಗಂಭೀರ ಸ್ವರೂಪದ್ದಾಗಿದ್ದವು. ೨೦೧೪ರ ಲೋಕಸಭಾ ಚುನಾವಣೆಗು ಮುಂಚೆ ಪ್ರದಾನಿಯವರು ನೀಡಿದ್ದ ಪ್ರತಿಯೊಬ್ಬರ ಖಾತೆಗು ಹದಿನೈದು ಲಕ್ಷ ಹಣ ಹಾಕುವ ಭರವಸೆ ಇವತ್ತಿಗೂಈಡೇರಿಲ್ಲ.

ಇದಕ್ಕೆ ಸರಕಾರ ಉತ್ತರಿಸಲೇ ಬೇಕಿತ್ತು. ಇನ್ನು ನೋಟ್ ಬ್ಯಾನ್ ನಂತರ ಈ ದೇಶದ ಸಾಮಾನ್ಯ ಜನತೆ ಅನುಭವಿಸಿದ ಸಂಕಷ್ಟಗಳ ಬಗ್ಗೆ ಅವರು ಸತ್ಯವನ್ನೆ ಹೇಳಿದ್ದರು. ಅದೇರೀತಿಜಿ.ಎಸ್.ಟಿ. ಕಾಯಿದೆಯನ್ನು ಅವಸರಸರವಾಗಿ ಅವೈಜ್ಞಾನಿಕವಾಗಿ ಜಾರಿಗೊಳಿಸಿ ದೇಶದ ಅರ್ಥ ವ್ಯವಸ್ಥೆ ಕುಸಿಯುವಂತೆ ಮಾಡಿದ್ದಕ್ಕೂ ಸರಕಾರವೇ ನೇರ ಹೊಣೆಯಾಗಿತ್ತು.

ದೇಶದಲ್ಲಿ ಧರ್ಮದ ಹೆಸರಲ್ಲಿ ನಡೆಯುತ್ತಿರುವ ಹಲ್ಲೆ ದೌರ್ಜನ್ಯಗಳ ಬಗ್ಗೆ ಸರಕಾರವೇ ಹೊಣೆಯಾಗಿತ್ತು. ದೇಶದ ರೈತ ಸಮುದಾಯದ ಸರಣಿ ಆತ್ಮಹತ್ಯೆಯನ್ನು ತಡೆಗಟ್ಟಲು ಮತ್ತು ರೈತರ ಸಾಲಮನ್ನಾ ಮಾಡಲು ವಿಫಲವಾದ ಕೇಂದ್ರ ಸರಕಾರದ ಬಗ್ಗೆ ಅವರು ಸರಿಯಾದ ಮಾತುಗಳಲ್ಲಿಯೇ ತರಾಟೆಗೆ ತೆಗೆದುಕೊಂಡಿದ್ದರು.

ಬಹುಶ: ತಮ್ಮ ರಾಜಕೀಯ ಬದುಕಿನಲ್ಲಿ ಮೊಟ್ಟ ಮೊದಲಬಾರಿಗೆ ರಾಹುಲ್ ಗಾಂದಿಯವರು ಇಷ್ಟೊಂದು ದೀರ್ಘಾವದಿಯ ಮೌಲ್ಯಯುತ ಬಾಷಣ ಮಾಡಿದ್ದರು. ಜೊತೆಗೆ ಅಂದಿನ ಅವರ ಬಾಷಣದಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಆತ್ಮವಿಶ್ವಾಸ, ಆಕ್ರಮಣಕಾರಿ ಮನೋಬಾವ ಎದ್ದು ಕಾಣುತ್ತಿತ್ತು.

ಪ್ರದಾನಮಂತ್ರಿಯನ್ನು ಅಪ್ಪಿಕೊಂಡಿದ್ದರ ಬಗೆಗಿನ ಟೀಕೆಗಳನ್ನು ಸ್ವಲ್ಪ ನೋಡೋಣ. ಹಲವರ ಪ್ರಕಾರ ಸದನದಲ್ಲಿ ಪ್ರದಾನಮಂತ್ರಿಯ ಸ್ಥಾನದಲ್ಲಿ ಮೋದಿಯವರು ಕೂತಿದ್ದಾಗ ರಾಹುಲರು ಅ ರೀತಿ ಅಪ್ಪಿಕೊಂಡಿದ್ದು ಸದನದ ಶಿಷ್ಟಾಚಾರವನ್ನು ಉಲ್ಲಂಗಿಸಿದಂತಾಗಿದೆ ಮತ್ತು ಪ್ರದಾನಿ ಸ್ಥಾನದ ಗೌರವವಕ್ಕೆ ಚ್ಯುತಿ ತರುವ ಕ್ರಿಯೆ ಎನ್ನಲಾಗುತ್ತಿದೆ, ಇರಬಹುದು! ಸದನದ ಶಿಷ್ಟಾಚಾರ ಉಲ್ಲಂಘನೆಯ ಬಗ್ಗೆ ನೋಡುವುದಾದರೆ, ನಮ್ಮ ಪ್ರಜಾಪ್ರಭುತ್ವವನ್ನು ಆರೋಗ್ಯವಾಗಿಡಲು ಶಿಷ್ಟಾಚಾರಗಳೇ ಸಾಕಾಗುವುದಿಲ್ಲ.

ಬದಲಿಗೆ ಕೆಲವೊಮ್ಮೆ ಕ್ಷುಲ್ಲಕ ರಾಜಕಾರಣದ ವೈರತ್ವವನ್ನೂ ಮರೆತು ಇಂತಹ ಅಪರೂಪದ ಮಾನವೀಯ ಸ್ಪಂದನೆಗಳು ಸಹ ಬೇಕಾಗುತ್ತವೆಯೆಂಬುದನ್ನು ನಮ್ಮ ಮಾಧ್ಯಮದ ಮಿತ್ರರಾಗಲಿ ಆಡಳಿತ ಪಕ್ಷದ ಸದಸ್ಯರುಗಳಾಗಲಿ ಅರ್ಥ ಮಾಡಿಕೊಳ್ಳಲೇ ಇಲ್ಲ ಎನ್ನುವುದೇ ವಿಷಾದನೀಯ.

ರಾಹುಲ್ ಗಾಂದಿಯವರ ಪ್ರತಿ ರಾಜಕೀಯ ನಡೆಯನ್ನೂ, ಪ್ರತಿ ಮಾತನ್ನೂ ಲೇವಡಿ ಮಾಡಿ ಚಪ್ಪಾಳೆ ಗಿಟ್ಟಿಸಿಕೊಳ್ಳುವ ಬಾಜಪದವರ ತಂತ್ರ ಇದೇನು ಮೊದಲಲ್ಲ. ಈ ಹಿಂದೆಯೂಪದೇ ಪದೇ ಮೋದಿಯವರು ರಾಹುಲರನ್ನು ಷಹಜಾದೇ(ರಾಜಕುಮಾರ) ಎಂದು ಅಣಗಿಸುತ್ತಲೇ ಮಾತಾಡುತ್ತಿದ್ದರು. ಜೊತೆಗೆ ರಾಹುಲರ ಬಾಷಣಗಳನ್ನು ತಮ್ಮ ಸಾರ್ವಜನಿಕ ಬಾಷಣಗಳಲ್ಲಿ ಅನುಕರಿಸಿ ಅಣಕಮಾಡುತ್ತ ಅವರ ಆತ್ಮವಿಶ್ವಾಸ ಉಡುಗುವಂತೆ ಮಾಡುತ್ತಲೇ ಬಂದಿದ್ದಾರೆ.

ಬಾಜಪದ ಮಾಧ್ಯಮ ಸೆಲ್ಲಿನವರಂತು ರಾಹುಲರನ್ನು ಪಪ್ಪು ಎನ್ನುತ್ತ ಅವರ ಬಗ್ಗೆ ಹಲವು ನೂರು ಜೋಕುಗಳನ್ನು ಹರಿಯ ಬಿಟ್ಟಿದ್ದಾರೆ. ಒಂದು ರಾಷ್ಟ್ರೀಯ ಪಕ್ಷದ ಅದ್ಯಕ್ಷರದ ನಂತರವೂ ರಾಹುಲರ ಅನನುಭವಿತನವನ್ನು ಅಪಹಾಸ್ಯ ಮಾಡುತ್ತ ಬಂದಿರುವುದನ್ನು ನಾವು ನೋಡುತ್ತಲೇ ಬಂದಿದ್ದೇವೆ.

ಆದರೆ ಈ ಬಾರಿ ತಮ್ಮ ಕಣ್ಣು ಹೊಡೆಯುವ ಕ್ರಿಯೆ ಮೂಲಕ ತಮ್ಮ ವಿರೋಧಿಗಳಿಗೆ ತಮ್ಮನ್ನು ಅಪಹಾಸ್ಯ ಮಾಡುವ ಆಯುಧವೊಂದನ್ನು ಸ್ವತ: ಅವರೇನೀಡಿದ್ದು ಮಾತ್ರವಿಷಾದನೀಯ!

‍ಲೇಖಕರು avadhi

July 24, 2018

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

3 ಪ್ರತಿಕ್ರಿಯೆಗಳು

  1. B.K.Rathnaiah Setty

    ಏಕಾಂಗಿಯಾಗಿ ವಿರೋಧ ಪಕ್ಷಗಳ ಒಗ್ಗಟ್ಟನ್ನು ನೆಲ ಕಚ್ಚುವಂತೆ ಮಾಡಿದ ವೀರ.

    ಪ್ರಧಾನಿ ಆಗೋವ್ನಿಗೆ ಸದನದ ರೀತಿ ರಿವಾಜುಗಳು
    ತಿಳಿಯದಿರುವುದು, ಮಂಗನಂತೆ ಹಲ್ಕಿರಿಯುವುದು,
    ಶಿಷ್ಟಾಚಾರ ಮರೆತು ಕಣ್ಣೊಡೆಯುವುದನ್ನು ವೈಭವೀಕರಿಸುವುದನು ನೋಡಿದರೆ ಮನೋಧರ್ಮ ತಿಳಿಯುತ್ತದೆ.

    ಅವಧಿಯಲ್ಲಿ ಇಂತಹ ಬರಹಗಳನ್ನು ಪ್ರೋತ್ಸಾಹಿಸಪ್ರೋತ್ಸಾಹಿಸುವುದು ಸರಿಯಲ್ಲ.

    ಪ್ರತಿಕ್ರಿಯೆ
  2. Shyamala Madhav

    ಗುಣಗ್ರಾಹಿಯಾದ ಇಂತಹ ಲೇಖನಗಳು ಹೆಚ್ಚು ಹೆಚ್ಚು ಬರಲಿ.

    ಪ್ರತಿಕ್ರಿಯೆ
  3. Hari

    ಬೇರೆ ಏನೂ ಬೇಡ. ಇದೇ “ಅವಧಿ”ಯಲ್ಲಿ ವೇತನ ಸಿಗುವಂತಹ ಒಂದು ಕೆಲಸ ಪಡೆಯ ಬೇಕು ಎಂದರೆ ಅದಕ್ಕೆ ಕನಿಷ್ಟ ಶೈಕ್ಷಣಿಕ ಹಾಗು ಅನುಭವದ ಅರ್ಹತೆಯಾದರೂ ಬೇಕು. ಯಾವ ಅರ್ಹತೆ, ಮಾನದಂಡದ ಮೇಲೆ ಇವರುಗಳು ದೇಶವನ್ನೇ ಮುನ್ನೆಡೆಸುವ ನಾಯಕರಾಗಿದ್ದಾರೆ? ಕತ್ತೆಯನ್ನು ಸಾವಿರ ಬಾರಿ ಕುದುರೆ, ಕುದುರೆ ಎಂದು ಹೇಳಿ ಹೇಳಿ.. ಕೇಳುವವನು “ಹಾಳ್ ಬಿದ್ ಹೋಗ್ಲಿ, ಆಯ್ತು ಬಿಡಪ್ಪ…ಇದು ಕುದುರೇನೆ” ಅನ್ನೋ ಹಾಗಿದೆ ಇದು. ಅಷ್ಟೊಂದು ಬರಗೆಟ್ಟಿದೆಯೇ ರಾಷ್ಟ್ರೀಯ ಪಕ್ಷ? ಇನ್ನೂ ಎಷ್ಟು ದಿನಗಳ ಗುಲಾಮಗಿರಿ? ಎಲ್ಲಾ ಉದ್ಧಾರಗಳ ಬಗ್ಗೆ ಆರ್ಭಟಿಸುವ ಬುದ್ದಿಜೀವಿಗಳಿಗೆ ಇಲ್ಲಿ ಮಾತ್ರ “ಜಾಣ ಕುರುಡು ಜಾಣ ಕಿವುಡು”
    ಅನನುಭವಿ… ಆದರೂ ಇಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷ… ಮುಂಬರುವ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿ. ಜೈ ಹೋ.

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: