ಖ್ಯಾತ ಲೇಖಕಿ ಎಚ್ ಎಸ್ ಪಾರ್ವತಿ ಅವರ ಮನೆನಪಿನಲ್ಲಿ ಸ್ಥಾಪಿಸಲಾಗಿರುವ ಪ್ರಶಸ್ತಿಯನ್ನು ಇತ್ತೀಚೆಗೆ ಖ್ಯಾತ ಲೇಖಕಿ ಎಚ್ ಎಸ್ ಶ್ರೀಮತಿ ಅವರಿಗೆ ವಿತರಿಸಲಾಯಿತು.
ಕರ್ನಾಟಕ ಲೇಖಕಿಯರ ಸಂಘ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲೇಖಕಿ ಮತ್ತು ಹಿರಿಯ ಪತ್ರಕರ್ತರಾದ ನಾಗಮಣಿ ಎಸ್.ರಾವ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾದ ವನಮಾಲಾ ಸಂಪನ್ನಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಸಿದ್ಧ ಕವಿ ಮತ್ತು ಚಿಂತಕರಾದ ಎಚ್.ಎಸ್. ವೆಂಕಟೇಶಮೂರ್ತಿ, ವಿಮರ್ಶಕ ರಾಮಲಿಂಗಪ್ಪ ಟಿ.ಬೇಗೂರು ಹಾಗೂ ಎಂ.ಎಸ್. ವಿದ್ಯಾ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.
0 ಪ್ರತಿಕ್ರಿಯೆಗಳು