ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಆಯ್ಕೆಯಾಗಿದ್ದಾರೆ
ರಾಯಚೂರಿನಲ್ಲಿ ಬರುವ ಡಿಸೆಂಬರನಲ್ಲಿ ಸಮ್ಮೇಳನ ಜರುಗಲಿದೆ
ದೆಹಲಿಯಲ್ಲಿ ನಡೆದ ರಾಜ್ಯ ಕಸಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ತಿರ್ಮಾನ ಕೈಗೊಳ್ಳಲಾಯಿತು.
ಕಸಾಪ ರಾಜ್ಯಾಧ್ಯಕ್ಷರಾದ ಮನು ಬಳಿಗಾರ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಕಸಾಪ ಅಧ್ಯಕ್ಷರು ಭಾಗಿಯಾಗಿದ್ದರು.
ಸಭೆಯಲ್ಲಿ ಡಾ.ಪಂಚಾಕ್ಷರಿ ಹಿರೇಮಠ, ವೈದೇಹಿ, ಚೆನ್ನಣ್ಣ ವಾಲೀಕಾರ, ಡಾ.ಎನ್ .ಆರ್.ನಾಯಕ ಹೆಸರು ಪ್ರಸ್ತಾಪವಾಯಿತು ಅಂತಿಮವಾಗಿ ಬರಗೂರು ರಾಮಚಂದ್ರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಅಭಿನಂದನೆಗಳು